ಮೃತ ವ್ಯಕ್ತಿ ಮಂಜು ಪ್ರಕಾಶ್. 
ರಾಜ್ಯ

ಬೆಂಗಳೂರು: Crocs ಚಪ್ಪಲಿಯಲ್ಲಿದ್ದ ವಿಷಕಾರಿ ಹಾವು ಕಚ್ಚಿ ಟೆಕ್ಕಿ ದುರಂತ ಸಾವು..!

2016ರಲ್ಲಿ ಬಸ್ ಅಪಘಾತ ಸಂಭವಿಸಿ, ಸಹೋದರ ಗಾಯಗೊಂಡಿದ್ದ. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅದರಿಂದ ಕಾಲಿನ ಸಂವೇದನೆಯನ್ನು ಕಳೆದುಕೊಂಡಿದ್ದ.

ಬೆಂಗಳೂರು: ಕ್ರೋಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ವಿಷಕಾರಿ ಹಾವು ಕಚ್ಚಿ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆಯೊಂದು ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ನಡೆದಿದೆ.

ಮಂಜು ಪ್ರಕಾಶ್ (41) ಮೃತ ದುರ್ವೈವಿ. ಅಪಘಾತದಲ್ಲಿ ಕಾಲಿನ ಸ್ಪರ್ಶಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ಮಂಜು ಪ್ರಕಾಶ್ ಅವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮೃತ ವ್ಯಕ್ತಿಯ ಕಿರಿಯ ಸಹೋದರ ಹರೀಶ್ ಮಾತನಾಡಿ, ಶುಕ್ರವಾರ ಮಧ್ಯಾಹ್ನ 12.45 ರ ಸುಮಾರಿಗೆ ಸಹೋದರ ಚಪ್ಪಲಿ ಧರಿಸಿ ಕಬ್ಬಿನ ಜ್ಯೂಸ್ ತರಲು ಹೊರ ಹೋಗಿದ್ದ. ಕೆಲವು ನಿಮಿಷಗಳ ನಂತರ ಹಿಂತಿರುಗಿದ್ದ. ನಂತರ ರೂಮಿಗೆ ಹೋಗಿ ಮಲಗಿದ್ದ. ಸುಮಾರು ಒಂದು ಗಂಟೆಯ ನಂತರ, ಕೆಲಸಗಾರನೊಬ್ಬ ಚಪ್ಪಲಿಯೊಳಗೆ ಹಾವು ಇರುವುದನ್ನು ಗಮನಿಸಿ ಕುಟುಂಬಕ್ಕೆ ನೀಡಿದ್ದಾರೆ.

ನನ್ನ ತಂದೆ ಚಪ್ಪಲಿಯನ್ನು ಪರಿಶೀಲಿಸಿದಾಗ ಕೊಳಕು ಮಂಡಲದ ಮರಿ ಹಾವು ಸತ್ತಿರುವುದು ಕಂಡು ಬಂದಿದೆ. ನಂತರ ಚಪ್ಪಲಿ ಧರಿಸಿ ಸಹೋದರ ಹೊರಗೆ ಹೋಗಿ ಬಂದಿದ್ದು ನಮಗೆ ಅರಿವಾಯಿತು. ಕೂಡಲೇ ರೂಮಿಗೆ ಹೋಗಿ ಪರಿಶೀಲಿಸಿದಾಗ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದುಸ ಬಾಯಿಯಿಂದ ನೊರೆ ಬಂದಿರುವುದು ಕಂಡು ಬಂದಿತ್ತು. ಮೂಗಿನಲ್ಲೂ ರಕ್ತ ಬಂದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆವು. ಅದರೆ, ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು ಎಂದು ಕಣ್ಣೀರು ಹಾಕಿದ್ದಾರೆ.

ಮೃತ ವ್ಯಕ್ತಿಗೆ ಹಾವು ಕಚ್ಚಿದ ಅನುಭವ ಆಗಿಲ್ಲವೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 2016ರಲ್ಲಿ ಬಸ್ ಅಪಘಾತ ಸಂಭವಿಸಿ, ಸಹೋದರ ಗಾಯಗೊಂಡಿದ್ದ. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅದರಿಂದ ಕಾಲಿನ ಸಂವೇದನೆಯನ್ನು ಕಳೆದುಕೊಂಡಿದ್ದ ಎಂದು ಹೇಳಿದ್ದಾರೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ಕುಡುಕರಿಗೊಬ್ಬ, ಬ್ಯಾಚುಲರ್‌ಗಳಿಗೆ ಮತ್ತೊಬ್ಬ ದೇವರು: ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ: 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆ

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ಯುವಕರ ದುರ್ಮರಣ

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

SCROLL FOR NEXT