ಸಂಗ್ರಹ ಚಿತ್ರ 
ರಾಜ್ಯ

Beautician ಮೇಲೆ ಖಾರದಪುಡಿ ಎರಚಿ ದರೋಡೆಗೆ ಯತ್ನ, ಮಹಿಳೆ ಬಂಧನ

ಮಧ್ಯಾಹ್ನ 12.30 ರ ಸುಮಾರಿಗೆ ಪಾರ್ಲರ್‌ಗೆ ಬಂದ ಆರೋಪಿತ ಮಹಿಳೆ, ತಾನು ಯಾರಿಗೋ ಕಾಯುತ್ತಿದ್ದೇನೆ ಎಂದು ಹೇಳಿ ಆಕೆ ತನ್ನ ಸರದಿಯನ್ನು ವಿಳಂಬ ಮಾಡುತ್ತಲೇ ಇದ್ದಳು.

ಬೆಂಗಳೂರು: ಬ್ಯೂಟಿಷಿಯನ್ ಮೇಲೆ ಖಾರದ ಪುಡಿ ಎರಚಿ ದರೋಡಗೆ ಯತ್ನ ನಡೆಸಿದ್ದ ಮಹಿಳೆಯೊಬ್ಬಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಚನ್ನಪಟ್ಟಣ ಪಟ್ಟಣದ ಎಂಜಿ ರಸ್ತೆಯಲ್ಲಿರುವ ಕೃತಿಕಾ ಬ್ಯೂಟಿ ಪಾರ್ಲರ್‌ನಲ್ಲಿ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆಯನ್ನು ಚನ್ನಪಟ್ಟಣ ಪಟ್ಟಣದ ನಿವಾಸಿ ಸರಿತಾ (44) ಎಂದು ಗುರುತಿಸಲಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಸಭಿಹಾ ಬಾನು (30) ಎಂಬ ಮಹಿಳೆಯನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿ ಮಹಿಳೆ ಕೂಡ ಚನ್ನಪಟ್ಟಣ ಪಟ್ಟಣದ ನಿವಾಸಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಧ್ಯಾಹ್ನ 12.30 ರ ಸುಮಾರಿಗೆ ಪಾರ್ಲರ್‌ಗೆ ಬಂದ ಆರೋಪಿತ ಮಹಿಳೆ, ತಾನು ಯಾರಿಗೋ ಕಾಯುತ್ತಿದ್ದೇನೆ ಎಂದು ಹೇಳಿ ಆಕೆ ತನ್ನ ಸರದಿಯನ್ನು ವಿಳಂಬ ಮಾಡುತ್ತಲೇ ಇದ್ದಳು. ಸುಮಾರು ಎರಡು ಗಂಟೆಗಳ ನಂತರ ಸರಿತಾ ಒಬ್ಬಂಟಿಯಾಗಿರುವುದನ್ನು ಗಮನಿಸಿ, ಮುಖದ ಮೇಲೆ ಖಾರದ ಪುಡಿ ಎರಚುವ ಮೂಲಕ ಹಲ್ಲೆ ನಡೆಸಿದ್ದಾಳೆ. ಬಳಿಕ ಮಂಗಳ ಸೂಕ್ತ ಕಸಿದು ಪರಾರಿಯಾಗಲು ಯತ್ನಿಸಿದ್ದಾಳೆ.

ಈ ವೇಳೆ ಉರಿ ತಾಳಲಾರದೆ ಹೊರ ಹೊದ ಸರಿತಾ ಅವರು, ಸಹಾಯಕ್ಕಾಗಿ ಕೂಗಿದ್ದಾರೆ. ಈ ವೇಳೆ ಹತ್ತಿರದ ಮೆಡಿಕಲ್ ಸ್ಟೋರ್‌ನ ಮಾಲೀಕ ರವಿ ಅವರು ರಕ್ಷಣೆಗೆ ಧಾವಿಸಿದ್ದು, ಇದೇ ವೇಳೆ ಆರೋಪಿತ ಮಹಿಳೆಯನ್ನೂ ಹಿಡಿದಿದ್ದಾರೆಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿತ ಮಹಿಳೆಯಿಂದ 2 ಲಕ್ಷ ರೂ. ಬೆಲೆ ಬಾಳುವ ಚಿನ್ನದ ಸರವನ್ನು ವಶಕ್ಕೆ ಪಡೆಯಲಾಗಿದ್ದು, ಈಕೆಯ ಪೂರ್ವಾಪರಗಳನ್ನು ಪರಿಶೀಲಿಸುತ್ತಿದ್ದೇವೆಂದು ತಿಳಿಸಿದ್ದಾರೆ.

ಚನ್ನಪಟ್ಟಣ ಪೂರ್ವ ಪೊಲೀಸರು ಸಭಿಹಾ ಬಾನು ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 309 (4) ರ ಅಡಿಯಲ್ಲಿ ದರೋಡೆ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಇಂದಿನಿಂದಲೇ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

'ಒಂದು ಸಣ್ಣ ಪ್ರಚೋದನೆ ಭಾರತದ ಭೂಪಟವೇ ಬದಲಾಗಬಹುದು': ಮತ್ತೆ ಪರಮಾಣು ಧಮ್ಕಿ ಹಾಕಿದ ಪಾಕ್ ಸೇನಾ ಮುಖ್ಯಸ್ಥ

ಢಾಕಾದಲ್ಲಿ ಭಾರತೀಯ ಸೇನಾ ಗುಪ್ತಚರ ಅಧಿಕಾರಿಗಳು: ಹಳೆಯ ಸೇನಾ ವಿಮಾನ ನಿಲ್ದಾಣಕ್ಕೆ ಬಾಂಗ್ಲಾ ಸೇನಾ ಮುಖ್ಯಸ್ಥ ಭೇಟಿ; ಸಭೆ!

ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ ವೇತನ ಕಟ್; ಶೇ.10-15 ರಷ್ಟು ತಂದೆ-ತಾಯಿ ಖಾತೆಗೆ!

ಅಮೆರಿಕ-ಭಾರತ ವ್ಯಾಪಾರ ಮಾತುಕತೆ: 'ಪ್ರಗತಿ ಕಂಡುಬಂದಿದೆ, ಯಾವುದೇ ಪ್ರಮುಖ ವ್ಯತ್ಯಾಸಗಳಿಲ್ಲ'; ವಾಣಿಜ್ಯ ಸಚಿವಾಲಯ

SCROLL FOR NEXT