ಸಂಗ್ರಹ ಚಿತ್ರ 
ರಾಜ್ಯ

ಭಾರೀ ಮಳೆಗೆ ಬೆಂಗಳೂರು ತತ್ತರ: 5 ಮರಗಳು ಧರೆಗೆ, ಹಲವೆಡೆ ಸಂಚಾರ ಅಸ್ತವ್ಯಸ್ತ!

ಯಲಹಂಕ, ಜಯದೇವ ಆಸ್ಪತ್ರೆ ಬಳಿ, ಜಯನಗರ, ವೈಟ್‌ಫೀಲ್ಡ್ ಮತ್ತು ಜ್ಞಾನಭಾರತಿ ಬಳಿ ಮರಗಳು ಉರುಳಿಬಿದ್ದಿವೆ ಎಂದು ಬಿಬಿಎಂಪಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ನಗರದಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, ಸಂಜೆ ವೇಳೆ ಒಟ್ಟು 30.6 ಮಿಮೀ ಮಳೆಯಾಗಿದೆ. ಮಳೆಯ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು, ಸವಾರರು ಪರದಾಡುವಂತಾಗಿತ್ತು.

ಸಂಜೆ 6 ಗಂಟೆಯ ನಂತರ ನಗರದಲ್ಲಿ ಭಾರೀ ಮಳೆಯಾಗಿದ್ದು, ಪರಿಣಾಮ 5 ಮರಗಳು ಧರೆಗುರುಳಿದವು. ಆದರೆ, ಯಾವುದೇ ಸಾವು ನೋವು ಅಥವಾ ವಾಹನಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯಂತ್ರಣ ಕೊಠಡಿ ಮಾಹಿತಿ ನೀಡಿದೆ.

ಬಿನ್ನಿ ಮಿಲ್ ಮುಖ್ಯ ರಸ್ತೆ, ಕೆಆರ್ ವೃತ್ತದ ಅಂಡರ್‌ಪಾಸ್, ಬನ್ನೇರುಘಟ್ಟ ಮುಖ್ಯ ರಸ್ತೆ, ಸಿಲ್ಕ್ ಬೋರ್ಡ್, ಬಿಳೇಕಳ್ಳಿ, ಪಾಣತ್ತೂರು, ಹೊಸೂರು ರಸ್ತೆ ಕಡೆಗೆ ಸಾಗುವ ವೀರಸಂದ್ರ ಜಂಕ್ಷನ್, ಜಯದೇವ, ವೈಟ್‌ಫೀಲ್ಡ್, ವರ್ತೂರು ಕೋಡಿ ಬಸ್ ನಿಲ್ದಾಣ ಮತ್ತು ಥುಬರಹಳ್ಳಿಯಲಲಿ ನೀರು ನಿಂತ ಕಾರಣ ಸಂಚಾರ ನಿಧಾನವಾಗಿತ್ತು.

ದೊಡ್ಡನೇಕುಂಡಿ ಹೊರ ವರ್ತುಲ ರಸ್ತೆ, ವರ್ತೂರು ಕಾಲೇಜು, ಉತ್ತರಳ್ಳಿ ವೃತ್ತ, ಮೆಜೆಸ್ಟಿಕ್ ಬಸ್ ನಿಲ್ದಾಣ, ಎಸ್‌ಜೆಪಿ ರಸ್ತೆ, ರುಪೀನಗರದಿಂದ ಬೊಮ್ಮನಹಳ್ಳಿ, ಇಕೋಸ್ಪೇಸ್, ​​ಬೆಳ್ಳಂದೂರು ಮತ್ತು ಬೊಮ್ಮನಹಳ್ಳಿಯಿಂದ ರುಪೀನಗರ ಮುಂತಾದ ಪ್ರದೇಶಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಇದಲ್ಲದೆ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ, ಹಳೆ ತರಗುಪೇಟೆ, ಸಂಪಂಗಿರಾಮ್ ನಗರ ಮತ್ತು ಜಯಮಹಲ್ ರಸ್ತೆಗಳಲ್ಲಿಯೂ ಸಂಚಾರ ಅಸ್ತವ್ಯಸ್ತವಾಗಿತ್ತು.

ಮುಖ್ಯ ರಸ್ತೆಯಲ್ಲಿ ನೀರು ನಿಂತ ಕಾರಣ, ಎಂಎಂಟಿ ಬಸ್ ನಿಲ್ದಾಣ, ಸಾಗರ್ ಜಂಕ್ಷನ್, ಸಾರಕ್ಕಿ ಜಂಕ್ಷನ್, ಎಚ್‌ಎಸ್‌ಬಿಸಿ ಜಂಕ್ಷನ್ ಮತ್ತು ಮಡಿವಾಳ ಪೊಲೀಸ್ ಠಾಣೆ ಬಳಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಎಂದು ತಿಳಿದುಬಂದಿದೆ.

ಯಲಹಂಕ, ಜಯದೇವ ಆಸ್ಪತ್ರೆ ಬಳಿ, ಜಯನಗರ, ವೈಟ್‌ಫೀಲ್ಡ್ ಮತ್ತು ಜ್ಞಾನಭಾರತಿ ಬಳಿ ಮರಗಳು ಉರುಳಿಬಿದ್ದಿವೆ ಎಂದು ಬಿಬಿಎಂಪಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಇದೀಗ ಬೇರುಸಹಿತ ಮರಗಳನ್ನು ತೆರವುಗೊಳಿಸಲು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BBMP ಇನ್ನು ಇತಿಹಾಸ: ಐದು ಮಹಾನಗರ ಪಾಲಿಕೆಗಳಾಗಿ ವಿಂಗಡಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ!

'ನಾನು ಕೋಣೆಯಲ್ಲಿ Hookah ಇಡುತ್ತಿರಲಿಲ್ಲ': ಅವಕಾಶ ವಂಚಿತ ಇರ್ಫಾನ್ ಪಠಾಣ್, MS Dhoni ವಿರುದ್ಧ ಕೊಟ್ಟಿದ್ದ ಹೇಳಿಕೆ, Video ವೈರಲ್!

ಗಣೇಶ ವಿಸರ್ಜನೆ ವೇಳೆ ದುರಂತ, 3 ಸಾವು: 'ನಾಗವಲ್ಲಿ' ಹಾಡಿಗೆ ಹೆಜ್ಜೆ ಹಾಕುತ್ತಿದ್ದವ ದಿಢೀರ್ ಕುಸಿದು ಬಿದ್ದ! Video Viral

ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ISLAM ಧ್ವಜ ಹಾರಾಟ: ಇಮಾಮ್ ವಿರುದ್ಧ ಪ್ರಕರಣ ದಾಖಲು! video

ಜೈಲು ಪಾಲಾಗಿರುವ ನಟಿ ರನ್ಯಾರಾವ್‌ಗೆ ಬಿಗ್ ಶಾಕ್: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ 102 ಕೋಟಿ ದಂಡ ಕಟ್ಟುವಂತೆ 'DRI' ನೋಟಿಸ್

SCROLL FOR NEXT