ಧರ್ಮಸ್ಥಳ ಪ್ರಕರಣದ ಸಾಕ್ಷಿ-ದೂರುದಾರ 
ರಾಜ್ಯ

ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ: ಧರ್ಮಸ್ಥಳ ಗ್ರಾಮಸ್ಥರಿಂದ SITಗೆ ಪತ್ರ

ಮಾಧ್ಯಮಗಳಲ್ಲಿ ತೋರಿಸಲಾಗಿರುವ ವ್ಯಕ್ತಿಯನ್ನು ನಾವು ಗುರ್ತಿಸಿದ್ದೇವೆ. ಆತ ವಿವಿಧ ಸ್ಥಳಗಳಿಗೆ ಶವಗಳನ್ನು ಸಾಗಿಸುತ್ತಿರುವುದು ಹಾಗೂ ಹೂಳುತ್ತಿರುವುದನ್ನು ನೋಡಿದ್ದೇವೆ.

ಮಂಗಳೂರು: ಧರ್ಮಸ್ಥಳ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ ಎಂದು ಧರ್ಮಸ್ಥಳ ಗ್ರಾಮಸ್ಥರ ಗುಂಪೊಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಪತ್ರ ಬರೆದಿದೆ.

ಗ್ರಾಮಸ್ಥರ ಪರವಾಗಿ ಧರ್ಮಸ್ಥಳ ನಿವಾಸಿ ತುಕಾರಾಮ ಗೌಡ ಎಂಬುವವರು ಎಸ್ಐಟಿಗೆ ಪತ್ರ ಸಲ್ಲಿಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾವು ಭಯದಲ್ಲಿ ಬದುಕುವಂತಾಗಿದೆ. ಆದರೆ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಸ್ಐಟಿ ರಚಿಸಿರುವುದು ನಮ್ಮ ವಿಶ್ವಾಸ ಹೆಚ್ಚಾಗುವಂತೆ ಮಾಡಿದೆ. ಮಾಧ್ಯಮಗಳಲ್ಲಿ ತೋರಿಸಲಾಗಿರುವ ವ್ಯಕ್ತಿಯನ್ನು ನಾವು ಗುರ್ತಿಸಿದ್ದೇವೆ. ಆತ ವಿವಿಧ ಸ್ಥಳಗಳಿಗೆ ಶವಗಳನ್ನು ಸಾಗಿಸುತ್ತಿರುವುದು ಹಾಗೂ ಹೂಳುತ್ತಿರುವುದನ್ನು ನೋಡಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಕಾರ್ಯಗಳು ರಹಸ್ಯವಾಗಿ ನಡೆದರೂ, ಹಳ್ಳಿ ಪರಿಸರದಲ್ಲಿ ಈ ವಿಷಯಗಳು ಬಹಿರಂಗವಾಗುವುದು ಸಾಮಾನ್ಯ. ಅಸ್ಥಿಪಂಜರಗಳನ್ನು ಹೂಳಿರುವುದಾಗಿ ದೂರು-ಸಾಕ್ಷಿದಾರ ವ್ಯಕ್ತಿ ಹೇಳಿದ್ದ. ಆದರೆ, ನಂತರ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾನೆಂದು ಮಾಧ್ಯಮಗಳು ವರದಿ ಮಾಡಿದವು. ಆತ ತನ್ನ ಹೇಳಿಕೆಯನ್ನೇಕೆ ಹಿಂತೆಗೆದುಕೊಂಡ ಎಂಬುದು ಗೊಂದಲ ಸೃಷ್ಟಿಸುತ್ತಿದೆ.

ಆ ವ್ಯಕ್ತಿ ಜನಸಂಚಾರ ಕಡಿಮೆ ಇರುವ ಜಾಗಗಳನ್ನು ಆರಿಸಿಕೊಂಡು ಶವಗಳನ್ನು ಹೂಳುತ್ತಿದ್ದ. ಅವನು ಹೇಳಿದ ಸ್ಥಳಗಳಿಗೆ ಹೋಗಿ ಶೋಧ ಕಾರ್ಯ ನಡೆಸಲು ಎಸ್ಐಟಿ ನಾವು ಸಹಕರಿಸುತ್ಯೇವೆ. ಸಮಾಧಿ ಮಾಡಿದ ಸ್ಥಳಗಳನ್ನು ಎಸ್ಐಟಿಗೆ ತೋರಿಸಲು ನಾವು ಸಿದ್ಧರಿದ್ದೇವೆ. ಸತ್ಯ ಮತ್ತು ನ್ಯಾಯಕ್ಕಾಗಿ ಎಸ್ಐಟಿಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'5 ದಿನ ಇರಾನ್ Power Plant ಗಳ ಮೇಲೆ ದಾಳಿ ಮಾಡಲ್ಲ..': Trump ತಾತ್ಕಾಲಿಕ ಕದನ ವಿರಾಮ ಘೋಷಣೆ! ಮಾತುಕತೆ ನಿರಾಕರಿಸಿದ ಇರಾನ್

ಭಾರತದ ತೈಲ ಮೀಸಲು ಎಷ್ಟಿದೆ?: ರಾಜ್ಯಸಭೆಯಲ್ಲಿ ಸರ್ಕಾರದಿಂದ ಮಾಹಿತಿ ಬಹಿರಂಗ

ಇರಾನ್ ಯುದ್ಧ: ಅಮೆರಿಕ ಅಧ್ಯಕ್ಷ Donald Trump ಕದನ ವಿರಾಮ ಘೋಷಣೆ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಭಾರಿ ಇಳಿಕೆ..!

ಪಶ್ಚಿಮ ಏಷ್ಯಾ ಸಂಘರ್ಷ: ನಾವು ಎಲ್ಲದಕ್ಕೂ ಸಿದ್ಧ.., ಭಾರತಕ್ಕೆ 'ಅಭೂತಪೂರ್ವ' ಸವಾಲುಗಳ ಸೃಷ್ಟಿ- ಪ್ರಧಾನಿ ಮೋದಿ; Video

ಸಂಸತ್ತಿನಲ್ಲಿ ಪಶ್ಚಿಮ ಏಷ್ಯಾ ಕುರಿತು ಚರ್ಚೆ: ಪ್ರಧಾನಿ ಹೊಸದೇನೂ ಹೇಳಿಲ್ಲ- ಪ್ರಿಯಾಂಕಾ ಗಾಂಧಿ

SCROLL FOR NEXT