ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ಕಪತಿ ದ್ರೌಪದಿ ಮುರ್ಮು 
ರಾಜ್ಯ

ಸೋನಿಯಾ ಗಾಂಧಿಗೆ "You Know Kannada" ಎಂದು ಕೇಳುವ ಧೈರ್ಯವಿದೆಯೇ...?

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಪ್ರವಾಸಕ್ಕಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮೈಸೂರಿಗೆ ಆಗಮಿಸಿದ್ದರು.

ಬೆಂಗಳೂರು: ಸೋನಿಯಾ ಗಾಂಧಿಯವರಿಗೆ "You Know Kannada" ಎಂದು ಕೇಳುವ ಧೈರ್ಯವಿದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಮಂಗಳವಾರ ಪ್ರಶ್ನೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯನವರೇ. ಕ್ಷಮಿಸಿ, ಭಾರತದ ಗೌರವಾನ್ವಿತ ರಾಷ್ಟ್ರಪತಿ ಗಳಾದ ದ್ರೌಪತಿ ಮುರ್ಮು ಅವರಿಗೆ, ನಿಮ್ಮ ನಾಯಕರಾದ ಸೋನಿಯಾ ಗಾಂಧಿಯವರಷ್ಟು ಕನ್ನಡದಲ್ಲಿ ಪ್ರಭುತ್ವ ಇಲ್ಲ. ಏಕೆಂದರೆ ನೀವೆಂದೂ ಸೋನಿಯಾ ಗಾಂಧಿಯವರಿಗೆ "You Know Kannada" ಎಂದು ಕೇಳೇ ಇಲ್ಲ. ಅಥವಾ ಕೇಳುವ ಧೈರ್ಯ ಮಾಡಿಲ್ಲ. ಎಷ್ಟೇ ಆದರೂ ನಿಮ್ಮ ಪಕ್ಷದ ನಾಯಕಿ ಭಾರತದ ರಾಷ್ಟ್ರಾಧ್ಯಕ್ಷರಿಗಿಂತ ಎತ್ತರದವರು ತಾನೆ? ಎಂದು ವ್ಯಂಗ್ಯವಾಡಿದ್ದಾರೆ.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಪ್ರವಾಸಕ್ಕಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮೈಸೂರಿಗೆ ಆಗಮಿಸಿದ್ದರು.

ಶಿಷ್ಟಾಚಾರದ ಭಾಗವಾಗಿ ರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರ ಮಾಡಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವೆ, ರಾಜ್ಯ ಆರೋಗ್ಯ ಸಚಿವರು ಸೇರಿ ಹಲವರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳಿಗೆ ಸ್ವಾಗತವನ್ನು ಕೋರುತ್ತಾ, ’ಮೇಡಂ ಯು ನೊ ಕನ್ನಡ’ ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯ ಅವರು, ಬಳಿಕ ನಾನು ಕನ್ನಡದಲ್ಲೇ ಮಾತನಾಡುತ್ತೇನೆಂದು ಭಾಷಣ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತೀವ್ರ ವಿರೋಧದ ನಡುವೆಯೂ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿದ ಜಿಲ್ಲಾಡಳಿತ!

ಪಾಕ್ ಹುಟ್ಟಡಗಿಸಿದ್ದ 'Game-Changer': ಭಾರತದ ಬತ್ತಳಿಕೆ ಸೇರಲಿವೆ ಮತ್ತಷ್ಟು S-400 ಏರ್ ಡಿಫೆನ್ಸ್ ಸಿಸ್ಟಮ್ಸ್!

Dharmasthala: ಸೌಜನ್ಯಾ ಪ್ರಕರಣದಲ್ಲಿ SIT ಮುಂದೆ ಹಾಜರಾದ Uday jain ಹೇಳಿದ್ದೇನು?

ವಿದೇಶಿಗರಿಂದ ಧರ್ಮೋಪದೇಶ ನಿಷೇಧ: ಮಿಲಾದ್-ಉನ್-ನಬಿ ಆಯೋಜಕರಿಗೆ ಪರಮೇಶ್ವರ ಸ್ಪಷ್ಟನೆ

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

SCROLL FOR NEXT