ಸಾಂದರ್ಭಿಕ ಚಿತ್ರ 
ರಾಜ್ಯ

MBBS ಓದಲು ಬಯಸುವವರಿಗೆ ಸಿಹಿ ಸುದ್ದಿ: ಕರ್ನಾಟಕಕ್ಕೆ 400 ಹೆಚ್ಚುವರಿ ವೈದ್ಯಕೀಯ ಸೀಟುಗಳಿಗೆ NMC ಅನುಮೋದನೆ!

ರಾಜ್ಯ ಸರ್ಕಾರ 15 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 100 ಹೆಚ್ಚುವರಿ ಸೀಟುಗಳಿಗಾಗಿ ಮನವಿ ಮಾಡಿತ್ತು. ಆದರೆ ಮೂಲಸೌಕರ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಎನ್‌ಎಂಸಿ ವಿನಂತಿಯನ್ನು ತಿರಸ್ಕರಿಸಿತ್ತು.

ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡಲು ಬಯಸುವವರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕಕ್ಕೆ ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯವಾಗಿದ್ದು, ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ.

ನೀಟ್‌ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ 9,263 ಸೀಟುಗಳು ಲಭ್ಯವಿದ್ದವು. ರಾಜ್ಯದ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ತಲಾ 50 ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅನುಮತಿ ನೀಡಿದ್ದು, ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ 9,663ಕ್ಕೆ ಏರಿಕೆಯಾಗಿದೆ.

ರಾಜ್ಯ ಸರ್ಕಾರ 15 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 100 ಹೆಚ್ಚುವರಿ ಸೀಟುಗಳಿಗಾಗಿ ಮನವಿ ಮಾಡಿತ್ತು. ಆದರೆ ಮೂಲಸೌಕರ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಎನ್‌ಎಂಸಿ ವಿನಂತಿಯನ್ನು ತಿರಸ್ಕರಿಸಿತ್ತು. ಎನ್‌ಎಂಸಿ ಬೆಳಗಾವಿ, ಚಿಕ್ಕಬಳ್ಳಾಪುರ, ಕಲಬುರಗಿ, ಹಾಸನ, ಮೈಸೂರು, ರಾಯಚೂರು, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಗಳ ಸೀಟು ಹೆಚ್ಚಳ ಮಾಡಲು ಸಮ್ಮತಿಸಿದೆ.

ಬೀದರ, ಚಾಮರಾಜನಗರ, ಗದಗ, ಕಾರವಾರ, ಕೊಪ್ಪಳ, ಮಂಡ್ಯ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಸೀಟು ಹೆಚ್ಚಳದ ಮನವಿಯನ್ನು ತಿರಸ್ಕರಿಸಿದೆ.

ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರದಲ್ಲಿ ತಲಾ 100 ಸೀಟುಗಳ ಹೆಚ್ಚಳಕ್ಕೆ ಮನವಿ ಮಾಡಲಾಗಿತ್ತು. ತಲಾ 50 ಸೀಟುಗಳನ್ನು ಅನುಮೋದಿಸಿದೆ. ಹುಬ್ಬಳ್ಳಿಯ ಜೆಜಿಎಂಎಂ ಕಾಲೇಜಿಗೂ (ಡೀಮ್ಡ್) 50 ಸೀಟು ಹೆಚ್ಚಿಸಲಾಗಿದೆ.

ಆದರೆ ಈ ಸೀಟುಗಳು ಹೊಸ ಆಯ್ಕೆ ಪ್ರವೇಶಕ್ಕೆ ಲಭ್ಯವಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕೆಇಎ ಎರಡನೇ ಸುತ್ತಿನ ತಾತ್ಕಾಲಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 12 ರಂದು ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ತನ್ನ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಪೂರ್ಣಗೊಳಿಸಲು ಕಾಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವಂದೇ ಮಾತರಂ'ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಖರ್ಗೆ

'ಸುಪ್ರೀಂ' ನಿವೃತ್ತ ನ್ಯಾಯಮೂರ್ತಿ ಬಿಆರ್ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ಚಪ್ಪಲಿ ಏಟು, Video!

ಬ್ಲಾಕ್‌ ಸೋಲ್ಜರ್‌ ಫ್ಲೈ ಬಳಸಿ ಕಸದಿಂದ ಗೊಬ್ಬರ: ರೌಂಡ್‌ ರಾಬಿನ್‌ ಪದ್ದತಿ ರದ್ದು; ಹಳೇ ಮಾದರಿಯಲ್ಲಿ ಇ-ಖಾತೆ ಅರ್ಜಿ ವಿಲೇವಾರಿ- ಡಿಕೆ ಶಿವಕುಮಾರ್

ರಿಯಲ್ ಲೈಫ್ ಹೀರೋ: ಭಿಕ್ಷೆ ಬೇಡುತ್ತಿದ್ದ ಯುವತಿಯ ರಕ್ಷಿಸಿ ಮದುವೆಯಾದ Golu Yadav!

ಈ ಬಣ್ಣದ ಪಾದರಕ್ಷೆಗಳನ್ನು ತಪ್ಪಿಯೂ ಧರಿಸಬೇಡಿ: ಚಪ್ಪಲಿಗಳಿಗೆ ಸೂಕ್ತವಾದ ಕಲರ್ ಯಾವುದು; ದಾರಿದ್ರ್ಯ ನಿವಾರಿಸಲು ಇರುವ ಮಾರ್ಗವೇನು?

SCROLL FOR NEXT