ಗೃಹ ಸಚಿವ ಜಿ ಪರಮೇಶ್ವರ 
ರಾಜ್ಯ

ವಿದೇಶಿಗರಿಂದ ಧರ್ಮೋಪದೇಶ ನಿಷೇಧ: ಮಿಲಾದ್-ಉನ್-ನಬಿ ಆಯೋಜಕರಿಗೆ ಪರಮೇಶ್ವರ ಸ್ಪಷ್ಟನೆ

ಅರಮನೆ ಮೈದಾನದಲ್ಲಿ ನಡೆಯಲಿರುವ ಮಿಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸುವ ಸಾಧ್ಯತೆಯಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಬೆಂಗಳೂರು: ಸೆಪ್ಟೆಂಬರ್ 5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಿಲಾದ್-ಉನ್-ನಬಿ ಸಮ್ಮೇಳನ ಆಯೋಜಿಸಿರುವ ಜಂಟಿ ಮಿಲಾದ್ ಸಮಿತಿಗೆ, ವಿದೇಶಿ ಧರ್ಮ ಗುರುಗಳು ಭಾರತದಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಅಥವಾ ಧರ್ಮೋಪದೇಶ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಅರಮನೆ ಮೈದಾನದಲ್ಲಿ ನಡೆಯಲಿರುವ ಮಿಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸುವ ಸಾಧ್ಯತೆಯಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಭಾರತದ ಗ್ರ್ಯಾಂಡ್ ಮುಫ್ತಿ ಶೇಖ್ ಅಬುಬಕರ್ ಅಹ್ಮದ್ ಮುಸ್ಲಿಯಾರ್ ಅವರೊಂದಿಗೆ ಯೆಮೆನ್‌ನ ಸೂಫಿ ಸಂತ ಹಬೀಬ್ ಉಮರ್ ಬಿನ್ ಹಫೀಜ್ ಅವರನ್ನು ಸಂಘಟಕರು ಆಹ್ವಾನಿಸಿದ್ದಾರೆ.

ಮಿಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮ ಗುರುಗಳು ಭಾಗವಹಿಸಿ ಭಾಷಣ ಮಾಡುವಂತಿಲ್ಲ. ಇದು ವೀಸಾ ನಿಯಮಗಳ ಉಲ್ಲಂಘನೆಯಾಗುವುದರಿಂದ ಆಯೋಜಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಮತ್ತು ಪೊಲೀಸರು ಕಾರ್ಯಕ್ರಮದ ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸಚಿವರು ಹೇಳಿದ್ದಾರೆ.

ಭಾರತದ ಕಾನೂನುಗಳಲ್ಲಿ ವಿದೇಶಿಯರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಧರ್ಮೋಪದೇಶ ಮಾಡಲು ಅಥವಾ ಭಾಗವಹಿಸಲು ಯಾವುದೇ ಅವಕಾಶವಿಲ್ಲ ಎಂದು ಕಾರ್ಯಕ್ರಮ ಆಯೋಜಿಸಿದ ಸಂಘಟಕರ ಗಮನಕ್ಕೆ ತಂದಿದ್ದೇವೆ ಎಂದು ಪರಮೇಶ್ವರ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ವಿದೇಶಿ ಧರ್ಮ ಗುರುಗಳನ್ನು ಆಹ್ವಾನಿಸಿರಬಹುದು. ಆದರೆ ನಿಯಮಗಳ ಉಲ್ಲಂಘನೆಯನ್ನು ತಪ್ಪಿಸಲು ಅವರನ್ನು ಆಹ್ವಾನಿಸದಂತೆ ಪೊಲೀಸರು ಸಂಘಟಕರಿಗೆ ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದರು.

ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ(FRRO) ಈ ಕಾರ್ಯಕ್ರಮದ ಮೇಲ್ವಿಚಾರಣೆ ನಡೆಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ