ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

ಕೋಲಾರ: ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು.

ಕೋಲಾರ ತಾಲ್ಲೂಕಿನ ಲಕ್ಷ್ಮಿಸಾಗರದಲ್ಲಿ ಪಂಪ್‌ಹೌಸ್‌ ಇದ್ದು, ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಿಂದ ಅವರು ವರ್ಚುವಲ್‌ ವೇದಿಕೆಯಲ್ಲಿ ಉದ್ಘಾಟನೆ ಮಾಡಲಿದ್ದಾರೆ.

ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದು ಹೇಳಿದರು.

ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ - ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ.

ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ ಎಂದು ತಿಳಿಸಿದರು.

ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, ರೂ.446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

ಬಳ್ಳಾರಿ ಆಳಲು ಹೊರಟ ಪಾಳೇಗಾರರ ಮಧ್ಯೆ ವಿಜೃಂಭಿಸಿದ ಗನ್ ಸಂಸ್ಕೃತಿ (ನೇರ ನೋಟ)

VB-G RAM G ಕಾಯ್ದೆ: ಕೇಂದ್ರದ ವಿರುದ್ಧ ಕಾನೂನು ಸಮರಕ್ಕೆ ರಾಜ್ಯ ಸರ್ಕಾರ ಮುಂದು..!

ಅಮೆರಿಕ ವಶಪಡಿಸಿಕೊಂಡಿದ್ದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು!

SCROLL FOR NEXT