'ಸನಾತನ ಸಂತ ನಿಯೋಗ' ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. 
ರಾಜ್ಯ

ಧರ್ಮಸ್ಥಳ ಪ್ರಕರಣ: ಧಾರ್ಮಿಕ ಮುಖಂಡರಿಂದ ದೆಹಲಿಯಲ್ಲಿ ಅಮಿತ್ ಶಾ ಭೇಟಿ, NIA ತನಿಖೆಗೆ ಒತ್ತಾಯ

ರಾಜಶೇಖರಾನಂದ ಸ್ವಾಮೀಜಿ ಅವರ ಪ್ರಕಾರ, 'ಸನಾತನ ಸಂತ ನಿಯೋಗ' ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಪ್ರಸ್ತುತ ನಡೆಯುತ್ತಿರುವ ಧರ್ಮಸ್ಥಳ ವಿವಾದದ ಬಗ್ಗೆ ಚರ್ಚಿಸಿತು.

ಮಂಗಳೂರು: 'ಸನಾತನ ಸಂತ ನಿಯೋಗ' ಬ್ಯಾನರ್ ಅಡಿಯಲ್ಲಿ ಕರ್ನಾಟಕದ ವಿವಿಧ ಮಠಗಳ ಮಠಾಧೀಶರು ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ರಾಜಶೇಖರಾನಂದ ಸ್ವಾಮೀಜಿ ಅವರ ಪ್ರಕಾರ, 'ಸನಾತನ ಸಂತ ನಿಯೋಗ' ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಪ್ರಸ್ತುತ ನಡೆಯುತ್ತಿರುವ ಧರ್ಮಸ್ಥಳ ವಿವಾದದ ಬಗ್ಗೆ ಚರ್ಚಿಸಿತು.

ಗುರುವಾರ ದೆಹಲಿಯಿಂದ ಹಿಂದಿರುಗಿದ ನಂತರ ಪಿಟಿಐ ಜೊತೆ ಮಾತನಾಡಿದ ಸ್ವಾಮೀಜಿ, ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಸಂಪುಟ ಸಭೆಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಮಿತ್ ಶಾ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣದ ಬಗ್ಗೆ ನಾವು ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇವೆ ಮತ್ತು ಅವರ ಭರವಸೆಯಿಂದ ನಮಗೆ ಸಂತೋಷವಾಗಿದೆ ಎಂದು ಅವರು ತಿಳಿಸಿದ್ದಾರೆ.

ಭಾರತದ ಒಳಗೆ ಮತ್ತು ಹೊರಗೆ ಕೆಲವು ಉತ್ತಮ ಸಂಬಂಧ ಹೊಂದಿರುವ ಸ್ಥಾಪಿತ ಹಿತಾಸಕ್ತಿಗಳು ಭಕ್ತರಲ್ಲಿ ಅಭದ್ರತೆ ಮತ್ತು ಭಯವನ್ನು ಹುಟ್ಟುಹಾಕುವ ಉದ್ದೇಶದಿಂದ ಹಿಂದೂ ನಂಬಿಕೆ ಮತ್ತು ಧರ್ಮದ ದೇವಾಲಯಗಳಿಗೆ ಕೆಟ್ಟ ಹೆಸರು ತರಲು ಒಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ನಮ್ಮ ನಿಯೋಗ ಅಮಿತ್ ಶಾ ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿತು" ಎಂದು ಮಠಾಧೀಶರು ಹೇಳಿದ್ದಾರೆ.

"ವಿವಾದದ ಬಗ್ಗೆ ನಾವು NIA ತನಿಖೆಯನ್ನು ಕೋರಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

MGNREGA ಬದಲಿಗೆ ಕೇಂದ್ರದ ಹೊಸ ಮಸೂದೆ: ರಾಜ್ಯಗಳ ಮೇಲೆ ಶೇ. 40ರಷ್ಟು ಹೊರೆ! ವಿಶೇಷತೆ ಏನು?

ಮಂಡ್ಯ To ಮಡಿಕೇರಿ: Facebook ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿಯ ಸುಲಿಗೆ ಹಾಗೂ ಹಲ್ಲೆ ಕೇಸ್; ನಾಲ್ವರು ಬಂಧನ!

Video: ಧಾರ್ಮಿಕ ಆಚರಣೆ ವೇಳೆ ಗುರಾಣಿಯಿಂದ ಬಾರಿಸಿದ ತೆಯ್ಯಂ, ಕುಸಿದು ಪ್ರಜ್ಞೆ ತಪ್ಪಿದ ಯುವಕ, ಇಷ್ಟಕ್ಕೂ ಆಗಿದ್ದೇನು?

ಉದ್ಧವ್‌ ಠಾಕ್ರೆಗೆ ಭಾರೀ ಹಿನ್ನಡೆ; ಬಿಜೆಪಿ ಸೇರಿದ ತೇಜಸ್ವಿ ಘೋಸಲ್ಕರ್

ನಿತಿನ್ ನಬಿನ್ ನೇರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ನೇಮಕ ಆಗಲಿಲ್ಲ ಏಕೆ?: ಕಾರ್ಯಾಧ್ಯಕ್ಷರ ಪಾತ್ರವೇನು?

SCROLL FOR NEXT