ದಿನೇಶ್ ಗುಂಡೂರಾವ್  
ರಾಜ್ಯ

ಆಟೋ, ಕ್ಯಾಬ್ ಚಾಲಕರಿಗೆ 'ಹೃದಯ ಆರೋಗ್ಯ ಯೋಜನೆ' ಪ್ರಾರಂಭಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್

ಶಾಲಾ ಪಠ್ಯಕ್ರಮದಲ್ಲಿ ಮಕ್ಕಳಿಗೆ ಆರೋಗ್ಯ ಮತ್ತು ಗುಣಮಟ್ಟದ ಜೀವನಶೈಲಿ ಶಿಕ್ಷಣ ನೀಡಲು ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರು: ಸರ್ಕಾರವು ಆಟೋ ಮತ್ತು ಕ್ಯಾಬ್ ಚಾಲಕರನ್ನು ಗುರಿಯಾಗಿಟ್ಟುಕೊಂಡು ಆರೋಗ್ಯ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕಾರ್ಯಕ್ರಮದಿಂದ ಅವರ ಆರೋಗ್ಯ ಮೇಲ್ವಿಚಾರಣೆ ಮಾಡಲು ರಕ್ತದಲ್ಲಿನ ಸಕ್ಕರೆ, ರಕ್ತದೊತ್ತಡ (ಬಿಪಿ), ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉಚಿತ ಎಕೋಕಾರ್ಡಿಯೋಗ್ರಾಮ್ (ಎಕೋ) ಪರೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇದು ಹೃದಯಾಘಾತದ ಅಪಾಯದಲ್ಲಿರುವವರನ್ನು ಮೊದಲೇ ಗುರುತಿಸಲು ಮತ್ತು ಸಮಯೋಚಿತ ಆರೈಕೆಯನ್ನು ಒದಗಿಸಲು ನಮಗೆ ಸಹಾಯ ಮಾಡುತ್ತದೆ ಎಂದು ರಾವ್ ಅವರು ಬುಧವಾರ ಅಧಿಕ ರಕ್ತದೊತ್ತಡದ ಕುರಿತು ನಡೆಸಿದ ಮಾಧ್ಯಮ ಕಾರ್ಯಾಗಾರದಲ್ಲಿ ಭಾಗವಹಿಸಿ ಹೇಳಿದರು. ಕರ್ನಾಟಕದಲ್ಲಿ ಅಧಿಕ ರಕ್ತದೊತ್ತಡದ ಹೆಚ್ಚುತ್ತಿರುವ ಹೊರೆಯ ಹಿನ್ನೆಲೆಯಲ್ಲಿ ಈ ಘೋಷಣೆ ಬಂದಿದೆ.

ಶಾಲಾ ಪಠ್ಯಕ್ರಮದಲ್ಲಿ ಮಕ್ಕಳಿಗೆ ಆರೋಗ್ಯ ಮತ್ತು ಗುಣಮಟ್ಟದ ಜೀವನಶೈಲಿ ಶಿಕ್ಷಣ ನೀಡಲು ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಅಧಿಕ ರಕ್ತದೊತ್ತಡವು ಮೂಕ ಸಾಂಕ್ರಾಮಿಕ ರೋಗವಾಗಿದ್ದು, ಪಾರ್ಶ್ವವಾಯು, ಹೃದಯಾಘಾತ, ಮೂತ್ರಪಿಂಡ ವೈಫಲ್ಯ ಮತ್ತು ಅಕಾಲಿಕ ಸಾವಿಗೆ ಕಾರಣವಾಗುತ್ತದೆ ಎಂದು ತಿಳಿಸಿದ್ದಾರೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿಯೂ ಅಧಿಕ ರಕ್ತದೊತ್ತಡ ಕಂಡುಬರುತ್ತಿದೆ. ಆಹಾರದಲ್ಲಿ ಉಪ್ಪಿನ ಅತಿಯಾದ ಬಳಕೆ, ತಂಬಾಕು ಸೇವನೆ, ದೈಹಿಕ ಚಟುವಟಿಕೆಯ ಕೊರತೆ ಇತ್ಯಾದಿಗಳು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಮಕ್ಕಳು ಯೌವನ ತಲುಪುವ ಹೊತ್ತಿಗೆ, ಅಧಿಕ ರಕ್ತದೊತ್ತಡವು ಅವರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ" ಎಂದು ಭಾರತೀಯ ನೀತಿ ಸಂಶೋಧನಾ ಅಧ್ಯಕ್ಷ ಡಾ. ಯು.ಎಸ್. ವಿಶಾಲ್ ರಾವ್ ಹೇಳಿದರು.

ಕ್ಯಾನ್ಸರ್, ಮಧುಮೇಹ, ಹೃದಯರಕ್ತನಾಳದ ಕಾಯಿಲೆಗಳು ಮತ್ತು ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮ (NPCDCS) ಅಡಿಯಲ್ಲಿ ಸಮುದಾಯ ಮಟ್ಟದ ತಪಾಸಣೆ ವಿಸ್ತರಿಸಲಾಗುತ್ತದೆ. ಎಲ್ಲಾ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಲ್ಲಿ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಜಾಗೃತಿ ಅಭಿಯಾನಗಳನ್ನು ನಡೆಸಲು ಸರ್ಕಾರ ಯೋಜಿಸಿದೆ ಎಂದರು.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS-5, 2019-20) ಪ್ರಕಾರ, ರಾಜ್ಯದ ನಾಲ್ಕು ವಯಸ್ಕರಲ್ಲಿ ಒಬ್ಬರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

SCROLL FOR NEXT