ಡಿಕೆ ಶಿವಕುಮಾರ್-ಆರ್ ಅಶೋಕ್ 
ರಾಜ್ಯ

ನಿಜವಾದ ಒಕ್ಕಲಿಗ ಎಂದಿಗೂ ರೈತರ ಬಗ್ಗೆ ದರ್ಪದ ಮಾತು ಆಡಲ್ಲ: ಡಿ.ಕೆ ಶಿವಕುಮಾರ್ ವಿರುದ್ಧ ಅಶೋಕ್ ಆಕ್ರೋಶ

ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಅದೆಲ್ಲಾ ಸುಳ್ಳು ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ.

ಬೆಂಗಳೂರು: ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಅದೆಲ್ಲಾ ಸುಳ್ಳು ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ. ಈಗ 'ರೈತರಿಗೆ ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ' ಎಂದು ರೈತರ ಅಸಹಾಯಕರು ಅನ್ನುವ ರೀತಿ ಹೀಯಾಳಿಸಿ ಮಾತನಾಡಿದ್ದೀರಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶಕ್ಕೆ ಅನ್ನ ನೀಡುವ ರೈತ ಜೀವನವಿಡೀ ತಾನು ಬದುಕುವುದು, ದುಡಿಯುವುದು ಎಲ್ಲವೂ ಇನ್ನೊಬ್ಬರಿಗಾಗಿಯೇ ಹೊರತು ತನ್ನ ಸ್ವಂತಕ್ಕಾಗಿ ಅಲ್ಲ ಎಂದು ಶಿವಕುಮಾರ್ ತಿಳಿದುಕೊಳ್ಳಬೇಕು. ಕೈಗಾರಿಕೆಗಳಿಗೆ, ರೈಲು, ರಸ್ತೆ, ವಿಮಾನ ನಿಲ್ದಾಣಕ್ಕೆ ಈ ಹಿಂದೆಯೂ ರೈತರ ಬಳಿ ಜಮೀನು ಪಡೆಯಲಾಗಿದೆ. HMT ಕಾರ್ಖಾನೆ ಬಂದಾಗ ಸ್ವತಃ ನಮ್ಮ ಕುಟುಂಬ ಕೂಡ ಜಮೀನು ನೀಡಿತ್ತು. ಆದರೆ ತಮ್ಮ ಜೀವನದ ಆಧಾರ ಸ್ತಂಭವಾಗಿರುವ ಜಮೀನನ್ನು ಕಳೆದುಕೊಳ್ಳುತ್ತಿರುವ ರೈತರ ಬಳಿ ಹೇಗೆ ಮಾತನಾಡಬೇಕು. ಯಾವ ರೀತಿ ಸಂವೇದನೆಯಿಂದ ನಡೆದುಕೊಳ್ಳಬೇಕು ಎನ್ನುವ ಕನಿಷ್ಠ ಸೌಜನ್ಯವೂ ಇಲ್ಲದ ತಮ್ಮಂತಹವರು ಮುಂದೊಂದು ದಿನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವುದು ಈ ನಮ್ಮ ನಾಡಿನ ದುರಂತ.

ರೈತರ ಕಷ್ಟ, ಕೃಷಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗೊತ್ತಿರುವ ನಿಜವಾದ ಒಕ್ಕಲಿಗ ಅನ್ನದಾತರ ಬಗ್ಗೆ ಈ ರೀತಿಯ ದರ್ಪದ ಮಾತುಗಳನ್ನು ಎಂದಿಗೂ ಆಡುವುದಿಲ್ಲ. ಒಕ್ಕಲಿಕೆಯನ್ನು, ಮಣ್ಣಿನ ಮಕ್ಕಳನ್ನು ಅಪಮಾನ ಮಾಡುತ್ತಿರುವ ತಮ್ಮ ಈ ದುರ್ನಡತೆಯ ಪರಿಣಾಮ ಮುಂದೆ ಗೊತ್ತಾಗಲಿದೆ ಎಂದು ಅಶೋಕ್ ಹೇಳಿದ್ದಾರೆ.

ರಾಜ್ಯದಲ್ಲಿ ಭೂಸ್ವಾಧೀನ ವಿಷಯವು ಮತ್ತೆ ತೀವ್ರ ಚರ್ಚೆಗೆ ಗುರಿಯಾಗಿದ್ದು ಉದ್ಯಮಕ್ಕಾಗಿ 9600 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆಯಲ್ಲಿ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರೈತರ ವಿರುದ್ಧ ಕೋಪಗೊಂಡಿದ್ದು ಈ ವೇಳೆ ದರ್ಪದ ಮಾತುಗಳನ್ನಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!

SCROLL FOR NEXT