ಸಿಎಂ ಸಿದ್ದರಾಮಯ್ಯ 
ರಾಜ್ಯ

ಮಿಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮಗುರುಗಳು ಭಾಗವಹಿಸುವಂತಿಲ್ಲ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 5 ಮತ್ತು 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಮೀಲಾದ್-ಉನ್-ನಬಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ದೇಶಾದ್ಯಂತ ಸಾವಿರಾರು ಭಾಗವಹಿಸುವ ನಿರೀಕ್ಷೆಯಿದೆ.

ಬೆಂಗಳೂರು: ಪ್ರವಾಸಿ ವೀಸಾದಲ್ಲಿ ಆಗಮಿಸಿರುವ ವಿದೇಶಿ ಧರ್ಮಗುರುಗಳು ಧರ್ಮೋಪದೇಶ ಮಾಡಲು ಅಥವಾ ಧಾರ್ಮಿಕ ಕೂಟಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಸೆಪ್ಟೆಂಬರ್ 5 ಮತ್ತು 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಮೀಲಾದ್-ಉನ್-ನಬಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ದೇಶಾದ್ಯಂತ ಸಾವಿರಾರು ಭಾಗವಹಿಸುವ ನಿರೀಕ್ಷೆಯಿದೆ.

ಈ ಕಾರ್ಯಕ್ರಮಕ್ಕೆ ಯೆಮೆನ್‌ನ ಹಬೀಬ್ ಉಮರ್ ಬಿನ್ ಹಫೀಜ್ ಮತ್ತು ಮುಫ್ತಿ ಶೇಖ್ ಅಬುಬಕರ್ ಅಹ್ಮದ್ ಮುಸ್ಲಿಯಾರ್ ಸೇರಿದಂತೆ ಪ್ರಮುಖ ಇಸ್ಲಾಮಿಕ್ ಧರ್ಮಗುರುಗಳಿಗೆ ಆಹ್ವಾನ ನೀಡಲಾಗಿದೆ ಎಂಬ ಮಾತುಗಳು ಕೇಳಿಬಂದಿದ್ದು, ಈ ಬಗ್ಗೆ ಹಲವು ಟೀಕೆ ಹಾಗೂ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸ್ಪಷ್ಟನೆ ನೀಡಿದೆ.

ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ಸರ್ಕಾರದ ಆದೇಶವನ್ನು ಈಗಾಗಲೇ ಆಯೋಜಕರ ಗಮನಕ್ಕೆ ತರಲಾಗಿದೆ. ಪೊಲೀಸರು ಸೂಕ್ತ ಸೂಚನೆ ನೀಡಿದ್ದಾರೆ. ಯಾವುದೇ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಯು ಕಾರ್ಯಕ್ರಮದ ಮೇಲ್ವಿಚಾರಣೆ ನಡೆಸುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ರ 'ಶಾಂತಿ ಮಂಡಳಿ' ಸೇರಲು ಭಾರತ ನಕಾರ; ಪಾಕಿಸ್ತಾನ ಸಹಿ!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು!

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ 'ದಂಡುಪಾಳ್ಯ ಗ್ಯಾಂಗ್' ಸದಸ್ಯನ ಬಂಧನ!

T20 World cup ಟೂರ್ನಿಗೆ ಬಾಂಗ್ಲಾದೇಶ ಬಹಿಷ್ಕಾರ: 2 ಮಿಲಿಯನ್ ಡಾಲರ್ ದಂಡ; ಈ ತಂಡಕ್ಕೆ ಜಾಕ್‌ಪಾಟ್!

ದಾವೋಸ್ ಸಮಾವೇಶ: ವಿಜಯಪುರ, ಬಳ್ಳಾರಿಯಲ್ಲಿ ಸಂಜೀವ್ ಗೊಯೆಂಕಾ ಸಮೂಹ 10,500 ಕೋಟಿ ರೂ ಹೂಡಿಕೆ!

SCROLL FOR NEXT