ಸಿಎಂ ಸಿದ್ದರಾಮಯ್ಯ 
ರಾಜ್ಯ

ಮಿಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮಗುರುಗಳು ಭಾಗವಹಿಸುವಂತಿಲ್ಲ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 5 ಮತ್ತು 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಮೀಲಾದ್-ಉನ್-ನಬಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ದೇಶಾದ್ಯಂತ ಸಾವಿರಾರು ಭಾಗವಹಿಸುವ ನಿರೀಕ್ಷೆಯಿದೆ.

ಬೆಂಗಳೂರು: ಪ್ರವಾಸಿ ವೀಸಾದಲ್ಲಿ ಆಗಮಿಸಿರುವ ವಿದೇಶಿ ಧರ್ಮಗುರುಗಳು ಧರ್ಮೋಪದೇಶ ಮಾಡಲು ಅಥವಾ ಧಾರ್ಮಿಕ ಕೂಟಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಸೆಪ್ಟೆಂಬರ್ 5 ಮತ್ತು 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಮೀಲಾದ್-ಉನ್-ನಬಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ದೇಶಾದ್ಯಂತ ಸಾವಿರಾರು ಭಾಗವಹಿಸುವ ನಿರೀಕ್ಷೆಯಿದೆ.

ಈ ಕಾರ್ಯಕ್ರಮಕ್ಕೆ ಯೆಮೆನ್‌ನ ಹಬೀಬ್ ಉಮರ್ ಬಿನ್ ಹಫೀಜ್ ಮತ್ತು ಮುಫ್ತಿ ಶೇಖ್ ಅಬುಬಕರ್ ಅಹ್ಮದ್ ಮುಸ್ಲಿಯಾರ್ ಸೇರಿದಂತೆ ಪ್ರಮುಖ ಇಸ್ಲಾಮಿಕ್ ಧರ್ಮಗುರುಗಳಿಗೆ ಆಹ್ವಾನ ನೀಡಲಾಗಿದೆ ಎಂಬ ಮಾತುಗಳು ಕೇಳಿಬಂದಿದ್ದು, ಈ ಬಗ್ಗೆ ಹಲವು ಟೀಕೆ ಹಾಗೂ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸ್ಪಷ್ಟನೆ ನೀಡಿದೆ.

ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ಸರ್ಕಾರದ ಆದೇಶವನ್ನು ಈಗಾಗಲೇ ಆಯೋಜಕರ ಗಮನಕ್ಕೆ ತರಲಾಗಿದೆ. ಪೊಲೀಸರು ಸೂಕ್ತ ಸೂಚನೆ ನೀಡಿದ್ದಾರೆ. ಯಾವುದೇ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಯು ಕಾರ್ಯಕ್ರಮದ ಮೇಲ್ವಿಚಾರಣೆ ನಡೆಸುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

34 ಮಾನವ ಬಾಂಬ್‌, 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ; ಎಲ್ಲೆಡೆ ಕಟ್ಟೆಚ್ಚರ!

'Delhi Metroಗೆ ಹೋಲಿಕೆ ಮಾಡಿದರೆ Bengaluru Metro ದರ ಅತ್ಯಂತ ದುಬಾರಿ': BMRCL, ರಾಜ್ಯ ಸರ್ಕಾರದ ವಿರುದ್ಧ Tejasvi Surya ಕಿಡಿ!

ಡಿಕೆ ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ಸೇರಿ 60 ಕ್ರಿಮಿನಲ್ ಕೇಸ್‌ ವಾಪಸ್‌ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ!

ಶ್ರೀಲಂಕಾ: 1,000 ಅಡಿ ಆಳದ ಪ್ರಪಾತಕ್ಕೆ ಉರುಳಿಬಿದ್ದ ಬಸ್; 15 ಮಂದಿ ಸಾವು, 16 ಜನರಿಗೆ ಗಾಯ

"Dismantle India": 'ಭಾರತವನ್ನು ಕೆಡವಿ, ವಿಭಜಿಸಿ' ಎಂದ ಆಸ್ಟ್ರಿಯಾ ಅರ್ಥಶಾಸ್ತ್ರಜ್ಞನ 'X' ಖಾತೆ ನಿಷೇಧ!

SCROLL FOR NEXT