ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳಲಾಗಿದೆ.
ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ, ಸ್ಟಿಕ್ಕರ್ ಅಂಟಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.
ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿಗಳು ಭೇಟಿನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.