ಎಡಮುರಿ ಫಾಲ್ಸ್‌ ಸಾಂದರ್ಭಿಕ ಚಿತ್ರ 
ರಾಜ್ಯ

Edamuri Falls: ಎಡಮುರಿ ಫಾಲ್ಸ್‌ನಲ್ಲಿ ಮುಳುಗಿ ಇಬ್ಬರು ಬೆಂಗಳೂರು ವಿದ್ಯಾರ್ಥಿಗಳ ಸಾವು

ಮೃತ ವಿದ್ಯಾರ್ಥಿಗಳನ್ನು ಬಿಬಿಎ ವಿದ್ಯಾರ್ಥಿಗಳಾದ ವಿಲಿಯಂ ಶ್ಯಾಮ್(21) ಮತ್ತು ವೆಂಕಟೇಶ್ (21) ಎಂದು ಗುರುತಿಸಲಾಗಿದೆ.

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿ ಜಲಪಾತದಲ್ಲಿ ಮುಳುಗಿ ಇಬ್ಬರು ಬೆಂಗಳೂರಿನ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ (Yedamuri Falls) ಶುಕ್ರವಾರ ನಡೆದಿದೆ.

ಎಡಮುರಿ ಫಾಲ್ಸ್‌ ನೋಡಲು ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ಇಬ್ಬರು ತೆರಳಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದಾಗ ದುರ್ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಬಿಬಿಎ ವಿದ್ಯಾರ್ಥಿಗಳಾದ ವಿಲಿಯಂ ಶ್ಯಾಮ್(21) ಮತ್ತು ವೆಂಕಟೇಶ್ (21) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ಮೃಹದೇಹಗಳನ್ನು ಹೊರ ತೆಗೆದಿದ್ದಾರೆ.

ವಿಹಾರಕ್ಕೆಂದು ಏಳು ಮಂದಿ ವಿದ್ಯಾರ್ಥಿಗಳ ತಂಡ ಬೆಂಗಳೂರಿನಿಂದ ಎಡಮುರಿ ಫಾಲ್ಸ್ ಗೆ ಬಂದಿತ್ತು. ಈಜಲು ನದಿಗೆ ಇಳಿದಾಗ ವಿಲಿಯಂ ಶ್ಯಾಂ ಮತ್ತು ವೆಂಕಟೇಶ್ ಸುಳಿಗೆ ಸಿಕ್ಕಿ ನೀರಿನಲ್ಲಿ ಮುಳುಗಿದ್ದಾರೆ. ಅವರನ್ನು ರಕ್ಷಿಸಲು ಸಹಪಾಠಿಗಳು ಹಾಗೂ ಸ್ಥಳೀಯರು ನಡೆಸಿದ ಪ್ರಯತ್ನ ವಿಫಲವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೆಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ