ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ 
ರಾಜ್ಯ

Raichur: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಇಬ್ಬರ ಬಂಧನ; Video

ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.

ರಾಯಚೂರು: ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.

ಗಣೇಶ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಬರುತ್ತಿರುವ ವೇಳೆ ಸಮೀಪದ ಅಂಗಡಿ ಮೇಲೆ ಹತ್ತಿದ್ದ ಇಬ್ಬರು ದುಷ್ಕರ್ಮಿಗಳು ನೋಡ ನೋಡುತ್ತಲೇ ಕಲ್ಲು ತೆಗೆದುಕೊಂಡು ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು.

ಈ ವೇಳೆ ಮಂಗಳವಾರ ಪೇಟೆ ನಿವಾಸಿಗಳಾದ ವಿನಯ್ ಮತ್ತು ಗಣೇಶ್ ಎಂಬುವವರಿಗೆ ಗಾಯಗಳಾಗಿದ್ದವು. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ವಿಡಿಯೋ ವೈರಲ್

ಆರೋಪಿಗಳು ಕಲ್ಲು ತೂರಾಟ ಮಾಡುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಬಳಿಕ ಸ್ಥಳೀಯರ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದರ್ ಬಜಾರ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ.

ಹಳೇದ್ವೇಷದ ಹಿನ್ನಲೆಯಲ್ಲಿ ಕಲ್ಲು ತೂರಾಟ

ಇನ್ನು ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಸತ್ಯಾಂಶ ಬಾಯಿ ಬಿಟ್ಟಿದ್ದು, ಹಳೆ ದ್ವೇಷದ ಹಿನ್ನಲೆಯಲ್ಲಿ ಕಲ್ಲು ತೂರಿದ್ದಾಗಿ ಹೇಳಿಕೊಂಡಿದ್ದಾರೆ.

ಕಲ್ಲು ತೂರಾಟದಲ್ಲಿ ಗಾಯಾಳುಗಳಾಗಿರುವ ವಿನಯ್ ಮತ್ತು ಗಣೇಶ್ ಜೊತೆಗೆ ಬಂಧಿತ ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಮತ್ತು ಪ್ರವೀಣ್ ಜಗಳ ಮಾಡಿಕೊಂಡಿದ್ದರು. ತಮ್ಮ ಏರಿಯಾ ಮೂಲಕ ಗಣೇಶ ಮೆರವಣಿಗೆ ಮಾಡಬಾರದು ಎಂದು ಜಗಳ ಮಾಡಿದ್ದರು.

ಇದೇ ಕಾರಣಕ್ಕೆ ಇದೀಗ ಅವರ ಏರಿಯಾದಲ್ಲಿ ಗಣೇಶ ವಿಸರ್ಜನೆ ಮಾಡಬಾರದು ಎಂದು ಕಲ್ಲು ತೂರಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

Gujarat: ಪಾವಗಡ ಬೆಟ್ಟದ ದೇವಾಲಯದಲ್ಲಿ ರೋಪ್‌ವೇ ದುರಂತ; 6 ಮಂದಿ ಸಾವು: video

ಭೀಕರ: ಬೃಹತ್ ಗುಡ್ಡ ದಿಢೀರ್ ಕುಸಿತ; ಕ್ಯಾಮರಾದಲ್ಲಿ ರೋಚಕ Video ಸೆರೆ!

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ: ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಸಿದ್ದರಾಮಯ್ಯ ಹೇಳಿದ್ದು ಏನು?

SCROLL FOR NEXT