ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ 
ರಾಜ್ಯ

Raichur: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಇಬ್ಬರ ಬಂಧನ; Video

ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.

ರಾಯಚೂರು: ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.

ಗಣೇಶ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಬರುತ್ತಿರುವ ವೇಳೆ ಸಮೀಪದ ಅಂಗಡಿ ಮೇಲೆ ಹತ್ತಿದ್ದ ಇಬ್ಬರು ದುಷ್ಕರ್ಮಿಗಳು ನೋಡ ನೋಡುತ್ತಲೇ ಕಲ್ಲು ತೆಗೆದುಕೊಂಡು ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು.

ಈ ವೇಳೆ ಮಂಗಳವಾರ ಪೇಟೆ ನಿವಾಸಿಗಳಾದ ವಿನಯ್ ಮತ್ತು ಗಣೇಶ್ ಎಂಬುವವರಿಗೆ ಗಾಯಗಳಾಗಿದ್ದವು. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ವಿಡಿಯೋ ವೈರಲ್

ಆರೋಪಿಗಳು ಕಲ್ಲು ತೂರಾಟ ಮಾಡುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಬಳಿಕ ಸ್ಥಳೀಯರ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದರ್ ಬಜಾರ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ.

ಹಳೇದ್ವೇಷದ ಹಿನ್ನಲೆಯಲ್ಲಿ ಕಲ್ಲು ತೂರಾಟ

ಇನ್ನು ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಸತ್ಯಾಂಶ ಬಾಯಿ ಬಿಟ್ಟಿದ್ದು, ಹಳೆ ದ್ವೇಷದ ಹಿನ್ನಲೆಯಲ್ಲಿ ಕಲ್ಲು ತೂರಿದ್ದಾಗಿ ಹೇಳಿಕೊಂಡಿದ್ದಾರೆ.

ಕಲ್ಲು ತೂರಾಟದಲ್ಲಿ ಗಾಯಾಳುಗಳಾಗಿರುವ ವಿನಯ್ ಮತ್ತು ಗಣೇಶ್ ಜೊತೆಗೆ ಬಂಧಿತ ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಮತ್ತು ಪ್ರವೀಣ್ ಜಗಳ ಮಾಡಿಕೊಂಡಿದ್ದರು. ತಮ್ಮ ಏರಿಯಾ ಮೂಲಕ ಗಣೇಶ ಮೆರವಣಿಗೆ ಮಾಡಬಾರದು ಎಂದು ಜಗಳ ಮಾಡಿದ್ದರು.

ಇದೇ ಕಾರಣಕ್ಕೆ ಇದೀಗ ಅವರ ಏರಿಯಾದಲ್ಲಿ ಗಣೇಶ ವಿಸರ್ಜನೆ ಮಾಡಬಾರದು ಎಂದು ಕಲ್ಲು ತೂರಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ರ 'ಶಾಂತಿ ಮಂಡಳಿ' ಸೇರಲು ಭಾರತ ನಕಾರ, ಪಾಕ್ ಸಹಿ!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತಕ್ಕೆ ಬಲಿಯಾದ ಮುರಳಿ ಕೃಷ್ಣ!

T20 World cup ಟೂರ್ನಿಗೆ ಬಾಂಗ್ಲಾದೇಶ ಬಹಿಷ್ಕಾರ: 2 ಮಿಲಿಯನ್ ದಂಡ; ಈ ತಂಡಕ್ಕೆ ಜಾಕ್‌ಪಾಟ್!

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯರಿಂದ ಅಭಿನಂದನೆ!

ಜಮ್ಮು ಮತ್ತು ಕಾಶ್ಮೀರ: 200 ಅಡಿ ಆಳದ ಕಮರಿಗೆ ಉರುಳಿಬಿದ್ದ ಸೇನಾ ವಾಹನ; 10 ಸಿಬ್ಬಂದಿ ಸಾವು! Video

SCROLL FOR NEXT