ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ 
ರಾಜ್ಯ

Raichur: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಇಬ್ಬರ ಬಂಧನ; Video

ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.

ರಾಯಚೂರು: ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.

ಗಣೇಶ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಬರುತ್ತಿರುವ ವೇಳೆ ಸಮೀಪದ ಅಂಗಡಿ ಮೇಲೆ ಹತ್ತಿದ್ದ ಇಬ್ಬರು ದುಷ್ಕರ್ಮಿಗಳು ನೋಡ ನೋಡುತ್ತಲೇ ಕಲ್ಲು ತೆಗೆದುಕೊಂಡು ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು.

ಈ ವೇಳೆ ಮಂಗಳವಾರ ಪೇಟೆ ನಿವಾಸಿಗಳಾದ ವಿನಯ್ ಮತ್ತು ಗಣೇಶ್ ಎಂಬುವವರಿಗೆ ಗಾಯಗಳಾಗಿದ್ದವು. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ವಿಡಿಯೋ ವೈರಲ್

ಆರೋಪಿಗಳು ಕಲ್ಲು ತೂರಾಟ ಮಾಡುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಬಳಿಕ ಸ್ಥಳೀಯರ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದರ್ ಬಜಾರ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ.

ಹಳೇದ್ವೇಷದ ಹಿನ್ನಲೆಯಲ್ಲಿ ಕಲ್ಲು ತೂರಾಟ

ಇನ್ನು ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಗಳು ಸತ್ಯಾಂಶ ಬಾಯಿ ಬಿಟ್ಟಿದ್ದು, ಹಳೆ ದ್ವೇಷದ ಹಿನ್ನಲೆಯಲ್ಲಿ ಕಲ್ಲು ತೂರಿದ್ದಾಗಿ ಹೇಳಿಕೊಂಡಿದ್ದಾರೆ.

ಕಲ್ಲು ತೂರಾಟದಲ್ಲಿ ಗಾಯಾಳುಗಳಾಗಿರುವ ವಿನಯ್ ಮತ್ತು ಗಣೇಶ್ ಜೊತೆಗೆ ಬಂಧಿತ ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಮತ್ತು ಪ್ರವೀಣ್ ಜಗಳ ಮಾಡಿಕೊಂಡಿದ್ದರು. ತಮ್ಮ ಏರಿಯಾ ಮೂಲಕ ಗಣೇಶ ಮೆರವಣಿಗೆ ಮಾಡಬಾರದು ಎಂದು ಜಗಳ ಮಾಡಿದ್ದರು.

ಇದೇ ಕಾರಣಕ್ಕೆ ಇದೀಗ ಅವರ ಏರಿಯಾದಲ್ಲಿ ಗಣೇಶ ವಿಸರ್ಜನೆ ಮಾಡಬಾರದು ಎಂದು ಕಲ್ಲು ತೂರಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 23 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ 2ನೇ ಮದುವೆಗೆ ಪತಿಯ ಸಿದ್ಧತೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಬೇಡಿದ ಪಾಕ್ ಮಹಿಳೆ!

SCROLL FOR NEXT