ಮಲ್ಲಿಕಾರ್ಜುನ ಖರ್ಗೆ 
ರಾಜ್ಯ

ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ; Video

ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ: ಅತಿವೃಷ್ಠಿಯಿಂದಾಗಿ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಯುವ ರೈತನ ವಿರುದ್ಧ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ (Mallikarjun Kharge) ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಬಂದಿದ್ದ ಯುವಕ ಅತಿವೃಷ್ಠಿಯಿಂದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ತೊರಗಿ ಬೆಳೆ ಹಾಳಾಗಿದೆ ಸರ್ ಎಂದು ಹೇಳಿದ್ದಾನೆ.

ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕನಿಗೆ ನೀನು ಎಷ್ಟು ಎಕರೆಯಲ್ಲಿ ಬೆಳೆ ಬೆಳೆದಿದ್ದೀಯಾ ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ಯುವಕ ನಾಲ್ಕು ಎಕರೆಯಲ್ಲಿ ಬೆಳೆ ಬೆಳೆದಿದ್ದೆ ಎಂದು ಉತ್ತರಿಸಿದನು. ಇದಕ್ಕೆ ಖರ್ಗೆ ನನ್ನದು ನಲವತ್ತು ಎಕರೆಯಲ್ಲಿ ಬೆಳೆದಿದ್ದು ಹಾಳಾಗಿದೆ.

ತೊಗರಿ ಮಾತ್ರವಲ್ಲ, ಹೆಸರು, ಹತ್ತಿ, ಸೂರ್ಯಕಾಂತಿ ಸಹ ಹಾಳಾಗಿದೆ. ನಾನು ಯಾರಿಗೆ ಹೋಗಿ ಹೇಳಲಿ. ನೀನು ಬೇಕಿದ್ದರೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಮಿತ್ ಶಾ (Amit Shah) ಹತ್ತಿರ ಹೋಗಿ ಕೇಳು. ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಕಿನಾಡಗೆ ಅಪ್ಪಳಿಸಿದ Cyclone Montha: 3-4 ಗಂಟೆಗಳ ಕಾಲ ಭಾರಿ ಮಳೆ; ಗಂಟೆಗೆ 110 ಕಿ.ಮೀ ವೇಗ!

ಇಂಡಿಯಾ ಬ್ಲಾಕ್ ಪ್ರಣಾಳಿಕೆ 'ಬಿಹಾರ್ ಕಾ ತೇಜಸ್ವಿ ಪ್ರಾಣ್' ಬಿಡುಗಡೆ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ!

'ಕರ್ಮ ರಿಟರ್ನ್ಸ್': 'The Kerala Files' ವಿರೋಧಿಸಿದ್ದ CPM ನಾಯಕನಿಗೂ ತಟ್ಟಿದ love Jihad ಬಿಸಿ, ಪುತ್ರಿಯ video ವೈರಲ್!

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ

Gold Rate: ಅಮೆರಿಕ-ಚೀನಾ ಉದ್ವಿಗ್ನತೆ ಶಮನ? ಚಿನ್ನದ ಬೆಲೆ ಭಾರಿ ಇಳಿಕೆ; ಇಂದಿನ ದರ ಹೀಗಿದೆ...

SCROLL FOR NEXT