ಮೈಸೂರು ದಸರಾ  
ರಾಜ್ಯ

ಮೈಸೂರು ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್ ಬಿಡುಗಡೆ: ಖರೀದಿ ಆರಂಭ

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ನಡೆಯಲಿರುವ ದಸರಾದಲ್ಲಿ ಗೋಲ್ಡ್‌ ಕಾರ್ಡ್‌ ಪಡೆದು ಎಲ್ಲ ಕಾರ್ಯಕ್ರಮಗಳನ್ನು ನೋಡಬಹುದಾಗಿದೆ.

ಮೈಸೂರು: ನಾಡಹಬ್ಬ ಮೈಸೂರು ದಸರಾ-2025ರ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳನ್ನು ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆಗೊಳಿಸಿದೆ. ಮೈಸೂರು ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಎಲ್ಲವನ್ನೂ ಕಣ್ತುಂಬಿಕೊಳ್ಳಬೇಕು ಎನ್ನುವವರಿಗೆ ಜಿಲ್ಲಾಡಳಿತ, 6,500 ರೂಪಾಯಿ ಗೋಲ್ಡ್‌ ಕಾರ್ಡ್‌, ಟಿಕೆಟ್‌ ಗಳನ್ನು ಬಿಡುಗಡೆ ಮಾಡಿದೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ನಡೆಯಲಿರುವ ದಸರಾದಲ್ಲಿ ಗೋಲ್ಡ್‌ ಕಾರ್ಡ್‌ ಪಡೆದು ಎಲ್ಲ ಕಾರ್ಯಕ್ರಮಗಳನ್ನು ನೋಡಬಹುದಾಗಿದೆ. ಈ ಸಂಬಂಧ ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಅವರು ಪ್ರಕಟಣೆ ಹೊರಡಿಸಿದ್ದಾರೆ.

ಯಾವುದಕ್ಕೆ ಎಷ್ಟು ಟಿಕೆಟ್?

ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ, ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳ ಮಾರಾಟ ಆರಂಭವಾಗಿದೆ.

ದಸರಾ ಗೋಲ್ಡ್ ಕಾರ್ಡ್ ಗೆ 6500 ರೂಪಾಯಿ ನಿಗದಿ ಮಾಡಲಾಗಿದೆ. ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಟಿಕೆಟ್ 3500 ಹಾಗೂ ಪಂಜಿನ ಕವಾಯತು ಟಿಕೆಟ್‌ಗೆ 1500 ರೂಪಾಯಿ ನಿಗದಿ ಮಾಡಲಾಗಿದ್ದು, ಆನ್​​ಲೈನ್​ ಮೂಲಕ ಸಹ ಪಡೆಯಬಹುದಾಗಿದೆ.

ಸಾರ್ವಜನಿಕರಿಗೆ ದಸರಾ ಗೋಲ್ಡ್‌ ಕಾರ್ಡ್ ಮತ್ತು ಟಿಕೆಟ್‌ಗಳನ್ನು ಮೈಸೂರು ದಸರಾ ಅಧಿಕೃತ ಜಾಲತಾಣ https://mysoredasara.gov.in/ ಮೂಲಕ ಖರೀದಿಸಬಹುದಾಗಿದೆ.

https://mysoredasara.gov.in/ ಅಧಿಕೃತ ಜಾಲತಾಣದಲ್ಲಿ ಶನಿವಾರ ಮಧ್ಯಾಹ್ನ 3ರಿಂದಲೇ ಆನ್​​ ಲೈನ್​​ ನಲ್ಲಿ ಖರೀದಿಗೆ ಲಭ್ಯ ಇದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗೋಲ್ಡ್​ ಕಾರ್ಡ್​ ಖರೀದಿಸಿರುವವರೆಗೆ(ಒಂದಕ್ಕೆ 6500) ಚಾಮರಾಜೇಂದ್ರ ಮೃಗಾಲಯ, ಚಾಮುಂಡಿ ಬೆಟ್ಟ(ವಿಶೇಷ ದರ್ಶನಕ್ಕೆ), ಮೈಸೂರು ಅರಮನೆಗೆ ಒಂದು ಬಾರಿ ಉಚಿತವಾಗಿ ಪ್ರವೇಶ ದೊರೆಯಲಿದೆ. ಡ್ರೋನ್ ಶೋ, ಜಂಬೂಸವಾರಿ ಹಾಗೂ ಪಂಜಿನ ಕವಾಯಿತು ವೀಕ್ಷಣೆಗೆ ಪ್ರತ್ಯೇಕವಾಗಿ ಆಸನಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel