ಕುಂದಾಪುರ ತಾಲೂಕಿನ ಗೋಪಾಡಿ ಬೀಚ್‌ 
ರಾಜ್ಯ

Kundapura: ಪ್ರವಾಸಕ್ಕೆಂದು ಬಂದು ಸಮುದ್ರ ಪಾಲು; ಮೂವರ ಸಾವು, ಓರ್ವನ ರಕ್ಷಣೆ!

ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿ ಬೀಚ್ ಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಈಜಾಡುತ್ತಿದ್ದರು.

ಕುಂದಾಪುರ: ಬೆಂಗಳೂರಿನಿಂದ ಪ್ರವಾಸಕ್ಕೆಂದು ಹೋಗಿದ್ದ ಯುವಕರ ತಂಡವೊಂದು ಸಮುದ್ರಕ್ಕಿಳಿದು ನೀರುಪಾಲಾಗಿರುವ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್‌ನಲ್ಲಿ ಭಾನುವಾರ ನಡೆದಿದೆ.

ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿ ಬೀಚ್ ಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಈಜಾಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳ ಅಬ್ಬರಕ್ಕೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನೀರಿನಲ್ಲೇ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಪೈಕಿ ಓರ್ವನನ್ನು ಸ್ಥಳೀಯರು ರಕ್ಷಿಸಿದ್ದು, ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ, ಪೊಲೀಸರು ಆಗಮಿಸಿದ್ದು, ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಆರಂಭದಲ್ಲಿ ನಾಲ್ವರು ಯುವಕರು ನೀರಿನಲ್ಲಿ ಮುಳುಗಿದ್ದು, ಈ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನಾಪತ್ತೆಯಾಗಿದ್ದ ಇನ್ನೋರ್ವನ ಮೃತದೇಹ ರಕ್ಷಣಾ ಕಾರ್ಯಾಚರಣೆಯ ಕೆಲ ಸಮಯದ ಬಳಿಕ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರಿನಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಂದ ಲಾಠಿಚಾರ್ಜ್, 21 ಮಂದಿ ಬಂಧನ: ಪೊಲೀಸರಿಗೆ ಸಿಎಂ ಖಡಕ್ ಸೂಚನೆ

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ನಾಲ್ವರು ಹೋಂಗಾರ್ಡ್​ ಸೇರಿ 8 ಮಂದಿ ಗಾಯ,ಸೆಕ್ಷನ್ 144 ಜಾರಿ

Ramayana: ಸೀತಾ ಪಾತ್ರಕ್ಕೆ Miss Universe India 2025 'ಮಣಿಕಾ' ಆಯ್ಕೆ!

ಜಿಎಸ್‌ಟಿ ಕಡಿತ: ಕಾರು ಪ್ರಿಯರಿಗೆ ಬಂಪರ್, Hyundai India ಬೆಲೆಯಲ್ಲಿ ಭಾರಿ ಇಳಿಕೆ! ಎಷ್ಟು ಅಗ್ಗ ಗೊತ್ತಾ?

'ಭಾರತದ ವಿಚಾರದಲ್ಲಿ ಡೊನಾಲ್ಡ್ ಟ್ರಂಪ್‌ಗೆ ತನ್ನ ತಪ್ಪಿನ ಅರಿವಾಗಿದೆ': ಭಾರತದ ಮಾಜಿ ರಾಜತಾಂತ್ರಿಕ ಕೆಪಿ ಫ್ಯಾಬಿಯನ್

SCROLL FOR NEXT