ಆರ್ ಅಶೋಕ್  
ರಾಜ್ಯ

ಮದ್ದೂರು ಕೋಮು ಹಿಂಸಾಚಾರಕ್ಕೆ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆ ಕ್ಷಮೆಯಾಚಿಸಬೇಕು: ಆರ್ ಅಶೋಕ್

ಕಳೆದ ರಾತ್ರಿ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಮದ್ದೂರು ಪಟ್ಟಣದಲ್ಲಿ ನಡೆದ ಕೋಮು ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಬೇಕೆಂದು ಎಂದರು.

ಬೆಂಗಳೂರು: ಮದ್ದೂರಿನ ಕೋಮು ಹಿಂಸಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.

ಕಳೆದ ರಾತ್ರಿ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಮದ್ದೂರು ಪಟ್ಟಣದಲ್ಲಿ ನಡೆದ ಕೋಮು ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಬೇಕೆಂದು ಎಂದರು.

ಕಾಂಗ್ರೆಸ್ ಸರ್ಕಾರದ ತುಷ್ಠೀಕರಣ ರಾಜಕೀಯದಿಂದ ದುಷ್ಕರ್ಮಿಗಳಿಗೆ ಗಲಾಟೆ ಮಾಡಲು ಧೈರ್ಯ ಬರುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಪರಿಗಣಿಸುವ ಒಂದು ವಿಶಿಷ್ಟ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳ ದೇವಾಲಯ, ನಂತರ ಮೈಸೂರು ಚಾಮುಂಡೇಶ್ವರಿ ದೇವಿ ಈಗ ಮದ್ದೂರು ಘಟನೆ ಮೂಲಕ ದೇವರಿಗೆ ಅವಮಾನ ಮಾಡಿದ್ದಾರೆ, ಇದಕ್ಕೆ ಕ್ಷಮೆಯಾಚಿಸಬೇಕು ಎಂದರು.

ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಿಸಿದ ಘಟನೆ ದೊಡ್ಡ ಪಿತೂರಿ. ಕಾಂಗ್ರೆಸ್ ತನ್ನ ನೀತಿಗಳು ಮತ್ತು ಹೇಳಿಕೆಗಳ ಮೂಲಕ ಇಂತಹ ಕೃತ್ಯಗಳನ್ನು ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂದು ಅವರು ಆರೋಪಿಸಿದರು.

ಇದು ಒಂದು ಘೋರ ಕೃತ್ಯ. ಜನರು ಇದು ಕರ್ನಾಟಕವೇ ಅಥವಾ ಪಾಕಿಸ್ತಾನವೇ ಎಂಬ ಗೊಂದಲದ ಸ್ಥಿತಿಯಲ್ಲಿದ್ದಾರೆ. ಇದು ಕಳೆದ ಎರಡು ವರ್ಷಗಳಿಂದ ನಡೆಯುತ್ತಿದೆ. ಧರ್ಮಸ್ಥಳ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ನಂತರ ಈಗ ಮದ್ದೂರು ಪಟ್ಟಣ ಸರದಿ ಎಂದು ಅಶೋಕ್ ಆರೋಪಿಸಿದರು.

ಗಣೇಶ ಮೆರವಣಿಗೆ ಸಾಗುವ ರಸ್ತೆ ಸಾರ್ವಜನಿಕರದ್ದು, ಇದು ಕರ್ನಾಟಕದ ಜನರಿಗೆ ಸೇರಿದ ರಸ್ತೆ, ಇದು ತೆರಿಗೆದಾರರ ರಸ್ತೆ, ಘರ್ಷಣೆಯನ್ನು ತಡೆಗಟ್ಟಲು ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಇಲ್ಲಿ ಪೊಲೀಸರನ್ನು ದೂಷಿಸುವ ಅಗತ್ಯವಿಲ್ಲ ಎಂದರು.

ಈ ಹಿಂದೆ ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಕೂಗಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಈ ಘಟನೆ ಹಿಂದೆ ಹಿಂದೂಗಳನ್ನು ಗುರಿಯಾಗಿಸಲು ಮಂಡ್ಯ ಮತ್ತು ಮೈಸೂರುನಲ್ಲಿ ಕುತಂತ್ರ ನಡೆಸಿರಬಹುದು. ಹಿಂದೂಗಳನ್ನು ವ್ಯವಸ್ಥಿತವಾಗಿ ಗುರಿಯಾಗಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಸಂಸತ್ ನಲ್ಲಿ ಕೋಲಾಹಲ, ಕಲಾಪ ಮುಂದೂಡಿಕೆ

ಔಟಾಗಿ ಹೋಗುತ್ತಿದ್ದ Pak ಆಟಗಾರನ ಕಡೆ ಕೋಪದಿಂದ ನುಗ್ಗಿದ ಸೂರ್ಯವಂಶಿ, ಕೂಡಲೇ ಮಧ್ಯಪ್ರವೇಶಿಸಿದ ವಿಹಾನ್, Video!

BLA ಯಲ್ಲಿ ಸುಶಿಕ್ಷಿತ ಹೆಣ್ಣು ಮಕ್ಕಳು! ಪಾಕ್ ವಿರುದ್ಧ ರಾತ್ರಿಯಿಡೀ ಹೋರಾಡಿ ಪ್ರಾಣತೆತ್ತ ಫಿದಾಯೀನ್': ಅಂತಿಮ ಕ್ಷಣದ Video!

ಸಿಜೆ ರಾಯ್ ಆತ್ಮಹತ್ಯೆ: ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ಒತ್ತಾಯ, ಕೇಂದ್ರಕ್ಕೆ ಪತ್ರ!

'ಮುಖಂಡರ ಮುಂದೆ ಗ್ಲಾಮರಸ್‌ ಆಗಿರಲು ಬಯಸಬೇಡಿ': ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿಕೆ ವೈರಲ್!

SCROLL FOR NEXT