ಸಾಂದರ್ಭಿಕ ಚಿತ್ರ 
ರಾಜ್ಯ

'ಸೆಲ್ಫಿ ಗೀಳಿಗೆ ಮತ್ತೆರಡು ಬಲಿ': ಹೊಸ್ಕೆರೆ ಕೆರೆಯಲ್ಲಿ ಕಾಲುಜಾರಿ ಇಬ್ಬರು ಸಾವು!

ರಾಮನಗರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಅವೆರಹಳ್ಳಿಯ ಹೊಸ್ಕೆರೆ ಕೆರೆಯಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಸೆಲ್ಫಿ ಹುಚ್ಚುತನದಿಂದ ಇಬ್ಬರು ಬಿಬಿಎ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಸೆಲ್ಫಿ ಗೀಳಿಗೆ ಮತ್ತೆರಡು ಬಲಿಯಾಗಿದ್ದು, ಕೆರೆಯಲ್ಲಿ ಫೋಟೋ ತೆಗೆದುಕೊಳ್ಳುತ್ತಿದ್ದಾಗ ಕಾಲು ಜಾರಿ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಅವೆರಹಳ್ಳಿಯ ಹೊಸ್ಕೆರೆ ಕೆರೆಯಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಸೆಲ್ಫಿ ಹುಚ್ಚುತನದಿಂದ ಇಬ್ಬರು ಬಿಬಿಎ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸಿದ್ಧಾರ್ಥ್ (20) ಮತ್ತು ನಿಶಾಂತ್ (21) ಎಂದು ಗುರುತಿಸಲಾಗಿದೆ, ಇಬ್ಬರೂ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ, 'ಆರು ಸ್ನೇಹಿತರು ರಾಮನಗರದ ರೆಸಾರ್ಟ್‌ಗೆ ಹೋಗಿ ನಂತರ ಅವೆರಹಳ್ಳಿಯ ಕೆರೆಗೆ ಭೇಟಿ ನೀಡಿದ್ದರು. ಸಂಜೆ 4.30 ರ ಸುಮಾರಿಗೆ ಕೆರೆಯಲ್ಲಿ ಇಳಿದು ಸೆಲ್ಫಿ ತೆಗೆದುಕೊಳ್ಳುವಾಗ, ಇಬ್ಬರೂ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರು. ಅವರ ಸ್ನೇಹಿತರು ಸಹಾಯಕ್ಕಾಗಿ ಸ್ಥಳೀಯರಿಗೆ ಮಾಹಿತಿ ನೀಡಿದರು.

ಆದರೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಶವಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ರಕ್ಷಣಾ ತಂಡಗಳು ಮೊದಲು ನಿಶಾಂತ್ ಶವವನ್ನು ಪತ್ತೆ ಮಾಡಿದವು ಮತ್ತು ಎರಡು ಗಂಟೆಗಳ ನಂತರ ಸಿದ್ಧಾರ್ಥ್ ಶವ ಪತ್ತೆಯಾಗಿದೆ. ಪೊಲೀಸರು ಅಸ್ವಾಭಾವಿಕ ಮರಣ ವರದಿ (ಯುಡಿಆರ್) ಪ್ರಕರಣವನ್ನು ದಾಖಲಿಸಿದ್ದಾರೆ.

ಮತ್ತೊಂದು ಘಟನೆ

ಇದೇ ರೀತಿಯ ಮತ್ತೊಂದು ಘಟನೆ ಬೆಳಗಾವಿ ಜಿಲ್ಲೆಯ ಯದೋಗ ಗ್ರಾಮದ ಬಳಿಯ ಮಲಪ್ರಭಾ ನದಿಯಲ್ಲಿ ನಡೆದಿದೆ. ಅನಂತ ಚತುರ್ದಶಿ ಆಚರಣೆಯ ಅಂತ್ಯದ ವೇಳೆಗೆ ಶನಿವಾರ ಸಂಜೆ ನದಿಯಲ್ಲಿ ಗಣೇಶ ವಿಗ್ರಹವನ್ನು ಮುಳುಗಿಸುವಾಗ 20 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದ. ಮೃತನನ್ನು ಯದೋಗ ನಿವಾಸಿ ಸಂಜಯ್ (ಶುಭಂ) ಕುಪ್ತೇಕರ್ ಎಂದು ಗುರುತಿಸಲಾಗಿದೆ. ಮೃತನನ್ನು ಯದೋಗ ನಿವಾಸಿ ಸಂಜಯ್ (ಶುಭಂ) ಕುಪ್ತೇಕರ್ ಎಂದು ಗುರುತಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಂಜಯ್ ವಿಗ್ರಹವನ್ನು ವಿಸರ್ಜನಾ ವಿಧಿಗಳಿಗಾಗಿ ಹೊತ್ತೊಯ್ಯುವ ಸ್ಥಳೀಯ ಗುಂಪಿನ ಭಾಗವಾಗಿದ್ದ. ನದಿ ದಂಡೆಯನ್ನು ತಲುಪಿದ ನಂತರ, ಅವರು ವಿಗ್ರಹದೊಂದಿಗೆ ನೀರಿಗೆ ಇಳಿದರು. ಆದಾಗ್ಯೂ, ನದಿಯ ಮಧ್ಯದ ಕಡೆಗೆ ಚಲಿಸುವಾಗ, ಆತ ಬಲವಾದ ಪ್ರವಾಹಕ್ಕೆ ಸಿಲುಕಿದರು. ಆತನನ್ನು ರಕ್ಷಿಸಲು ಅವರ ಸಹಚರರು ಹತಾಶ ಪ್ರಯತ್ನ ಮಾಡಿದರೂ ಕೆಲವೇ ಕ್ಷಣಗಳಲ್ಲಿ ಆತ ನೀರಿನಲ್ಲಿ ಕೊಚ್ಚಿ ಹೋದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

SCROLL FOR NEXT