ಸಾಂದರ್ಭಿಕ ಚಿತ್ರ 
ರಾಜ್ಯ

ಕೊಪ್ಪಳ: ನಿಗೂಢ ರೋಗದಿಂದ ಸಾವಿರಾರು ಕೋಳಿಗಳು ಸಾವು; ಬಯಲಿನಲ್ಲೇ ಬಿಸಾಡುತ್ತಿರುವ ಮಾಲೀಕರು!

ಬಿ ಹೊಸಳ್ಳಿಯ ನಿವಾಸಿಗಳು ತಮ್ಮ ಗ್ರಾಮದಲ್ಲಿ ಸುಮಾರು ಆರು ತಿಂಗಳ ಹಿಂದೆ ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, H5N1 ಇರುವುದು ದೃಢಪಟ್ಟಿದೆ ಎಂದು ಹೇಳಿದರು.

ಕೊಪ್ಪಳ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕೋಳಿಗಳಿಗೆ ನಿಗೂಢ ರೋಗ ಹಬ್ಬಿದ್ದು, ನೂರಾರು ಕೋಳಿಗಳು ಸಾವನ್ನಪ್ಪಿವೆ. ಸ್ಥಳೀಯ ಕೋಳಿ ಸಾಕಣೆ ಕೇಂದ್ರಗಳಲ್ಲಿ ಈ ಕಾಯಿಲೆಯು ವೇಗವಾಗಿ ಹರಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕೋಳಿಗಳ ಸಾವು ಅನೇಕರ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತಿದೆ ಎಂದು ಹೇಳಿದ್ದಾರೆ. ಕೆಲವು ಕೋಳಿ ಮಾಲೀಕರು ಸತ್ತ ಕೋಳಿಗಳನ್ನು ಹೂಳುತ್ತಿಲ್ಲ, ಬದಲಿಗೆ ಅವುಗಳನ್ನು ಬಯಲಿನಲ್ಲಿ ಎಸೆಯುತ್ತಿದ್ದಾರೆ.

ಹೀಗಾಗಿ ಈ ಸಾಕಣೆ ಕೇಂದ್ರಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರು ಈಗ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಸಾವಿಗೆ ನಿಖರವಾದ ಕಾರಣವನ್ನು ಗುರುತಿಸಲು ಶೀಘ್ರದಲ್ಲೇ ತಜ್ಞರನ್ನು ಕರೆಯುವುದಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ.

ಕೋಳಿ ಸಾಕಣೆ ಕೇಂದ್ರಗಳಿಗೆ ಭೇಟಿ ನೀಡಿ, ರಕ್ತದ ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆಗೆ ಕಳುಹಿಸುವುದಾಗಿ ತಜ್ಞರು ತಿಳಿಸಿದ್ದಾರೆ. ಬಿ ಹೊಸಳ್ಳಿಯ ನಿವಾಸಿಗಳು ತಮ್ಮ ಗ್ರಾಮದಲ್ಲಿ ಸುಮಾರು ಆರು ತಿಂಗಳ ಹಿಂದೆ ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, H5N1 ಇರುವುದು ದೃಢಪಟ್ಟಿದೆ ಎಂದು ಹೇಳಿದರು.

ಸತ್ತ, ಸೋಂಕಿತ ಕೋಳಿಗಳನ್ನು ಸರಿಯಾಗಿ ವಿಲೇವಾರಿ ಮಾಡದ ಕಾರಣ, ಕೋಳಿ ಮಾಲೀಕರಿಂದ ಸಾಂಕ್ರಾಮಿಕ ರೋಗ ಹರಡುವ ಅಪಾಯ ಹೆಚ್ಚುತ್ತಿದೆ. ಇದು ಅಪರಾಧ. ಗ್ರಾಮಸ್ಥರು ಈಗಾಗಲೇ H5N1 ಬಗ್ಗೆ ಭಯಭೀತರಾಗಿದ್ದು, ಮೊಟ್ಟೆ ಮತ್ತು ಕೋಳಿ ತಿನ್ನಲು ನಿರಾಕರಿಸುತ್ತಿದ್ದಾರೆ.

ತಪ್ಪಿತಸ್ಥ ಕೋಳಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಗ್ರಾಮ ಪಂಚಾಯತ್ ಮತ್ತು ಇತರ ಅಧಿಕಾರಿಗಳನ್ನು ಮನವಿ ಮಾಡುತ್ತೇವೆ ಎಂದು ಗ್ರಾಮಸ್ಥರೊಬ್ಬರು ಹೇಳಿದರು.

ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿ ತೋಟಗಳಿಗೆ ಭೇಟಿ ನೀಡಿ, ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆಗಾಗಿ ಮಧ್ಯಪ್ರದೇಶಕ್ಕೆ ಕಳುಹಿಸಿದ್ದಾರೆ. ಎರಡು ಮೂರು ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?