ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಬೀದರ್: ಸಾಲ ಬಾಧೆ; ಕಾಲುವೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9) ರಿತಿಕ್ (7) ಹಾಗೂ ಏಳು ತಿಂಗಳ ರಾಕೇಶ ಎಂದು ಗುರುತಿಸಲಾಗಿದೆ.

ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9) ರಿತಿಕ್ (7) ಹಾಗೂ ಏಳು ತಿಂಗಳ ರಾಕೇಶ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮಗ ಶ್ರೀಕಾಂತ ಬದುಕುಳಿದಿದ್ದಾರೆ.

ಸಾಲಬಾಧೆ ಆತ್ಮಹತ್ಯೆಗೆ ಕಾರಣ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ಪರಿಶೀಲನೆ ನಡೆಸಿದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಾಲ್ಕಿ ತಾಲೂಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಂಧ್ರಪ್ರದೇಶ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, 22 ಮಂದಿಗೆ ಗಾಯ-Video

ಬೆಳಗಾವಿ ಅಧಿವೇಶನ ಮಧ್ಯೆ ಡಿನ್ನರ್ ಪಾಲಿಟಿಕ್ಸ್: ಸಿಎಂ ಬೆನ್ನಲ್ಲೇ 30ಕ್ಕೂ ಹೆಚ್ಚು ಶಾಸಕರ ಜೊತೆ ಡಿಸಿಎಂ ಮೀಟಿಂಗ್

ದ್ವೇಷ ಭಾಷಣದ ವಿರುದ್ದ ಕಾನೂನು ಹೋರಾಟ: ಸಿದ್ದರಾಮಯ್ಯ ರಾಜಕಾರಣಕ್ಕೆ ಕಪ್ಪು ಚುಕ್ಕೆ; ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದ ಅಸಹಕಾರ: ಭೂಸ್ವಾಧೀನ ಪ್ರಕ್ರಿಯೆ ವಿಳಂಬ- ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳು ಸ್ಥಗಿತ- ಅಶ್ವಿನಿ ವೈಷ್ಣವ್

ವಿಜಯಪುರ: ವಚನಶಿಲಾ ಮಂಟಪದ ಸ್ಥಾಪಕ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

SCROLL FOR NEXT