ಥಾವರಚಂದ್ ಗೆಹ್ಲೋಟ್  
ರಾಜ್ಯ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೋಗಿನಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ಗೆ ಕರೆ; ವಂಚನೆಗೆ ಯತ್ನ

ಕರೆ ಮಾಡಿದ ವ್ಯಕ್ತಿ ತಾನು ಧರ್ಮೇಂದ್ರ ಪ್ರಧಾನ್ ಎಂದು ಪರಿಚಯಿಸಿಕೊಂಡಿದ್ದಾನೆ ಮತ್ತು ಯಾವುದೋ ಕೆಲಸಕ್ಕೆ ಸಂಬಂಧಿಸಿದಂತೆ ಸಹಾಯ ಕೋರಿದ್ದಾನೆ.

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸೋಗಿನಲ್ಲಿ ವ್ಯಕ್ತಿಯೊಬ್ಬ ಮೂರು ದಿನಗಳ ಹಿಂದೆ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ದೂರವಾಣಿ ಮೂಲಕ ವಂಚಿಸಲು ಯತ್ನಿಸಿದ್ದಾರೆ ಎಂದು ರಾಜಭವನದ ಮೂಲಗಳು ಮಂಗಳವಾರ ತಿಳಿಸಿವೆ.

ಅಧಿಕಾರಿಗಳ ಪ್ರಕಾರ, ಶನಿವಾರ (ಸೆ. 6) ಮಧ್ಯಾಹ್ನ ವ್ಯಕ್ತಿಯಿಂದ ಕರೆ ಬಂದಿದೆ.

ಕರೆ ಮಾಡಿದ ವ್ಯಕ್ತಿ ತಾನು ಧರ್ಮೇಂದ್ರ ಪ್ರಧಾನ್ ಎಂದು ಪರಿಚಯಿಸಿಕೊಂಡಿದ್ದಾನೆ ಮತ್ತು ಯಾವುದೋ ಕೆಲಸಕ್ಕೆ ಸಂಬಂಧಿಸಿದಂತೆ ಸಹಾಯ ಕೋರಿದ್ದಾನೆ.

'ಏನೋ ಸರಿಯಿಲ್ಲ ಎಂಬುದನ್ನು ಗ್ರಹಿಸಿದ ರಾಜ್ಯಪಾಲರು, ಮುಂದಿನ ಕರೆ ಬರುವವರೆಗೆ ಕಾಯಲು ನಿರ್ಧರಿಸಿದರು. ಆದರೆ, ಕರೆ ಬಾರದಿದ್ದಾಗ, ಗೆಹ್ಲೋಟ್ ಕೇಂದ್ರ ಸಚಿವರ ಕಚೇರಿಯನ್ನು ಸಂಪರ್ಕಿಸಿ ಪರಿಶೀಲಿಸಿದ್ದಾರೆ. ಆಗ ಅವರು, ಪ್ರಧಾನ್ ಅವರು ಅಂತಹ ಯಾವುದೇ ಕರೆ ಮಾಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ' ಎಂದು ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ನಂತರ, ರಾಜ್ಯಪಾಲರು ತಮ್ಮ ವ್ಯಾಪ್ತಿಯ ಪೊಲೀಸ್ ಉಪ ಆಯುಕ್ತರಿಗೆ ಮಾಹಿತಿ ನೀಡಿ, ವಿವರವಾದ ತನಿಖೆಗೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯಲ್ಲಿ ಕರೆ ಕೋಲ್ಕತ್ತಾದಿಂದ ಬಂದಿರಬಹುದು ಎಂದು ತಿಳಿದುಬಂದಿದೆ.

ವಂಚಕನ ಗುರುತನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT