ಥಾವರಚಂದ್ ಗೆಹ್ಲೋಟ್  
ರಾಜ್ಯ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೋಗಿನಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ಗೆ ಕರೆ; ವಂಚನೆಗೆ ಯತ್ನ

ಕರೆ ಮಾಡಿದ ವ್ಯಕ್ತಿ ತಾನು ಧರ್ಮೇಂದ್ರ ಪ್ರಧಾನ್ ಎಂದು ಪರಿಚಯಿಸಿಕೊಂಡಿದ್ದಾನೆ ಮತ್ತು ಯಾವುದೋ ಕೆಲಸಕ್ಕೆ ಸಂಬಂಧಿಸಿದಂತೆ ಸಹಾಯ ಕೋರಿದ್ದಾನೆ.

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸೋಗಿನಲ್ಲಿ ವ್ಯಕ್ತಿಯೊಬ್ಬ ಮೂರು ದಿನಗಳ ಹಿಂದೆ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ದೂರವಾಣಿ ಮೂಲಕ ವಂಚಿಸಲು ಯತ್ನಿಸಿದ್ದಾರೆ ಎಂದು ರಾಜಭವನದ ಮೂಲಗಳು ಮಂಗಳವಾರ ತಿಳಿಸಿವೆ.

ಅಧಿಕಾರಿಗಳ ಪ್ರಕಾರ, ಶನಿವಾರ (ಸೆ. 6) ಮಧ್ಯಾಹ್ನ ವ್ಯಕ್ತಿಯಿಂದ ಕರೆ ಬಂದಿದೆ.

ಕರೆ ಮಾಡಿದ ವ್ಯಕ್ತಿ ತಾನು ಧರ್ಮೇಂದ್ರ ಪ್ರಧಾನ್ ಎಂದು ಪರಿಚಯಿಸಿಕೊಂಡಿದ್ದಾನೆ ಮತ್ತು ಯಾವುದೋ ಕೆಲಸಕ್ಕೆ ಸಂಬಂಧಿಸಿದಂತೆ ಸಹಾಯ ಕೋರಿದ್ದಾನೆ.

'ಏನೋ ಸರಿಯಿಲ್ಲ ಎಂಬುದನ್ನು ಗ್ರಹಿಸಿದ ರಾಜ್ಯಪಾಲರು, ಮುಂದಿನ ಕರೆ ಬರುವವರೆಗೆ ಕಾಯಲು ನಿರ್ಧರಿಸಿದರು. ಆದರೆ, ಕರೆ ಬಾರದಿದ್ದಾಗ, ಗೆಹ್ಲೋಟ್ ಕೇಂದ್ರ ಸಚಿವರ ಕಚೇರಿಯನ್ನು ಸಂಪರ್ಕಿಸಿ ಪರಿಶೀಲಿಸಿದ್ದಾರೆ. ಆಗ ಅವರು, ಪ್ರಧಾನ್ ಅವರು ಅಂತಹ ಯಾವುದೇ ಕರೆ ಮಾಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ' ಎಂದು ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ನಂತರ, ರಾಜ್ಯಪಾಲರು ತಮ್ಮ ವ್ಯಾಪ್ತಿಯ ಪೊಲೀಸ್ ಉಪ ಆಯುಕ್ತರಿಗೆ ಮಾಹಿತಿ ನೀಡಿ, ವಿವರವಾದ ತನಿಖೆಗೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯಲ್ಲಿ ಕರೆ ಕೋಲ್ಕತ್ತಾದಿಂದ ಬಂದಿರಬಹುದು ಎಂದು ತಿಳಿದುಬಂದಿದೆ.

ವಂಚಕನ ಗುರುತನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್