ಥಾವರಚಂದ್ ಗೆಹ್ಲೋಟ್  
ರಾಜ್ಯ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೋಗಿನಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ಗೆ ಕರೆ; ವಂಚನೆಗೆ ಯತ್ನ

ಕರೆ ಮಾಡಿದ ವ್ಯಕ್ತಿ ತಾನು ಧರ್ಮೇಂದ್ರ ಪ್ರಧಾನ್ ಎಂದು ಪರಿಚಯಿಸಿಕೊಂಡಿದ್ದಾನೆ ಮತ್ತು ಯಾವುದೋ ಕೆಲಸಕ್ಕೆ ಸಂಬಂಧಿಸಿದಂತೆ ಸಹಾಯ ಕೋರಿದ್ದಾನೆ.

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸೋಗಿನಲ್ಲಿ ವ್ಯಕ್ತಿಯೊಬ್ಬ ಮೂರು ದಿನಗಳ ಹಿಂದೆ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ದೂರವಾಣಿ ಮೂಲಕ ವಂಚಿಸಲು ಯತ್ನಿಸಿದ್ದಾರೆ ಎಂದು ರಾಜಭವನದ ಮೂಲಗಳು ಮಂಗಳವಾರ ತಿಳಿಸಿವೆ.

ಅಧಿಕಾರಿಗಳ ಪ್ರಕಾರ, ಶನಿವಾರ (ಸೆ. 6) ಮಧ್ಯಾಹ್ನ ವ್ಯಕ್ತಿಯಿಂದ ಕರೆ ಬಂದಿದೆ.

ಕರೆ ಮಾಡಿದ ವ್ಯಕ್ತಿ ತಾನು ಧರ್ಮೇಂದ್ರ ಪ್ರಧಾನ್ ಎಂದು ಪರಿಚಯಿಸಿಕೊಂಡಿದ್ದಾನೆ ಮತ್ತು ಯಾವುದೋ ಕೆಲಸಕ್ಕೆ ಸಂಬಂಧಿಸಿದಂತೆ ಸಹಾಯ ಕೋರಿದ್ದಾನೆ.

'ಏನೋ ಸರಿಯಿಲ್ಲ ಎಂಬುದನ್ನು ಗ್ರಹಿಸಿದ ರಾಜ್ಯಪಾಲರು, ಮುಂದಿನ ಕರೆ ಬರುವವರೆಗೆ ಕಾಯಲು ನಿರ್ಧರಿಸಿದರು. ಆದರೆ, ಕರೆ ಬಾರದಿದ್ದಾಗ, ಗೆಹ್ಲೋಟ್ ಕೇಂದ್ರ ಸಚಿವರ ಕಚೇರಿಯನ್ನು ಸಂಪರ್ಕಿಸಿ ಪರಿಶೀಲಿಸಿದ್ದಾರೆ. ಆಗ ಅವರು, ಪ್ರಧಾನ್ ಅವರು ಅಂತಹ ಯಾವುದೇ ಕರೆ ಮಾಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ' ಎಂದು ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ನಂತರ, ರಾಜ್ಯಪಾಲರು ತಮ್ಮ ವ್ಯಾಪ್ತಿಯ ಪೊಲೀಸ್ ಉಪ ಆಯುಕ್ತರಿಗೆ ಮಾಹಿತಿ ನೀಡಿ, ವಿವರವಾದ ತನಿಖೆಗೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯಲ್ಲಿ ಕರೆ ಕೋಲ್ಕತ್ತಾದಿಂದ ಬಂದಿರಬಹುದು ಎಂದು ತಿಳಿದುಬಂದಿದೆ.

ವಂಚಕನ ಗುರುತನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ? ಮಹಾ ಸಿಎಂ 'ಫಡ್ನವೀಸ್ ಪತ್ನಿ' ವಿರುದ್ಧ ನೆಟ್ಟಿಗರ ಆಕ್ರೋಶ, Video ವೈರಲ್

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿ ಚಿನ್ನದ ಖಜಾನೆ ಕಂಡು ED ಶಾಕ್; 21 ಕೆಜಿ ಗೋಲ್ಡ್ ಬಿಸ್ಕೇಟ್ ಜಪ್ತಿ

Israel attacks: ದೋಹಾದಲ್ಲಿ 'ಹಮಾಸ್' ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ! ಹೇಡಿತನ ಎಂದ ಕತಾರ್!

SCROLL FOR NEXT