ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 36 ವರ್ಷದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನ ಬಂಧನ

ನೆಲಮಂಗಲ ತಾಲ್ಲೂಕಿನ ಬೋಳಮಾರನಹಳ್ಳಿ ಗ್ರಾಮದಲ್ಲಿ ಸಂಜೆ 5.45 ರಿಂದ 6 ಗಂಟೆಯ ನಡುವೆ ಈ ಘಟನೆ ನಡೆದಿದೆ. ಕಾರ್ಮಿಕ ಮಹಿಳೆಯಾಗಿರುವ ಸಂತ್ರಸ್ತೆ,

ನೆಲಮಂಗಲ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಜೋಳದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತ ವಯಸ್ಕನನ್ನು ಬಂಧಿಸಲಾಗಿದೆ.

ನೆಲಮಂಗಲದ ಬೋಳಮಾರನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾರು 17 ವರ್ಷದ ಹುಡುಗ ತನ್ನ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆಯ ಕೈ ಹಿಡಿದು ಹೊಲದ ಒಳಗೆ ಎಳೆದೊಯ್ದಿದ್ದಾನೆ. ಇದೇ ವೇಳೆ ಮಹಿಳೆ, ರಕ್ಷಣೆಗಾಗಿ ತಪ್ಪಿಸಿಕೊಳ್ಳಲು ಕೂಗಿಕೊಂಡಿದ್ದಾಳೆ. ಆಕೆಯ ಚೀರಾಟ ಕೇಳಿದ ಗ್ರಾಮಸ್ಥರು ಮಹಿಳೆಯನ್ನು ರಕ್ಷಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ನೆಲಮಂಗಲ ತಾಲ್ಲೂಕಿನ ಬೋಳಮಾರನಹಳ್ಳಿ ಗ್ರಾಮದಲ್ಲಿ ಸಂಜೆ 5.45 ರಿಂದ 6 ಗಂಟೆಯ ನಡುವೆ ಈ ಘಟನೆ ನಡೆದಿದೆ. ಕಾರ್ಮಿಕ ಮಹಿಳೆಯಾಗಿರುವ ಸಂತ್ರಸ್ತೆ, ದೊಡ್ಡಬಳ್ಳಾಪುರದಲ್ಲಿರುವ ತನ್ನ ತಾಯಿಯ ಮನೆಗೆ ಮಗುವನ್ನು ಕರೆದುಕೊಂಡು ಹೋಗಲು ಹೋಗುತ್ತಿದ್ದಳು.

ಬೋಳಮಾರನಹಳ್ಳಿ ಕಡೆಗೆ ವೇಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಆರೋಪಿ, ಸಂತ್ರಸ್ತೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುವುದನ್ನು ನೋಡಿ ತನ್ನ ಬೈಕನ್ನು ಹಿಂದಕ್ಕೆ ಸರಿಸಿ ಆಕೆಯ ಪಕ್ಕದಲ್ಲಿ ನಿಲ್ಲಿಸಿದನು. ಇದ್ದಕ್ಕಿದ್ದಂತೆ ಆಕೆಯನ್ನು ಹೊಲದ ಕಡೆಗೆ ಎಳೆಯಲು ಪ್ರಾರಂಭಿಸಿದನು.

ಆಕೆ ಕೆಳಗೆ ಬಿದ್ದಾಗ, ಆಕೆಯ ಕಾಲುಗಳನ್ನು ಹಿಡಿದು ಎಳೆದನು. ಸಂತ್ರಸ್ತೆ ಸಹಾಯಕ್ಕಾಗಿ ಕಿರುಚಲು ಪ್ರಾರಂಭಿಸಿದಾಗ ಆರೋಪಿ ಆಕೆಯ ಬಾಯಿಯನ್ನು ಬಿಗಿದಿದ್ದಾನೆ ಎಂದು ಆರೋಪಿಸಲಾಗಿದೆ.

ಆಕೆ ತನ್ನ ಚಿನ್ನದ ಸರ ಮತ್ತು ಕಿವಿಯೋಲೆಗಳನ್ನು ತೆಗೆದುಕೊಳ್ಳಲು ಕೇಳಿದಾಗಲೂ ಆತ ಆಕೆಯನ್ನು ಬಿಡಲಿಲ್ಲ. ಆರೋಪಿ ಆಕೆಯ ವಿವಸ್ತ್ರಗೊಳಿಸಲು ಪ್ರಯತ್ನಿಸಿದನು. ಆಕೆಯ ಕೂಗು ಕೇಳಿ, ಸ್ಥಳೀಯರು ಆಕೆಯ ರಕ್ಷಣೆಗೆ ಬಂದರು. ಆರೋಪಿ ತನ್ನ ದ್ವಿಚಕ್ರ ವಾಹನವನ್ನು ಬಿಟ್ಟು ಓಡಲು ಪ್ರಾರಂಭಿಸಿದನು.

ಸಾರ್ವಜನಿಕರು ಅವನನ್ನು ಬೆನ್ನಟ್ಟಿ ಹಿಡಿದು ತೀವ್ರವಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದರು. ಗಾಯಗೊಂಡಿದ್ದ ಮಹಿಳೆಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಕಾಮುಕನ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ? ಮಹಾ ಸಿಎಂ 'ಫಡ್ನವೀಸ್ ಪತ್ನಿ' ವಿರುದ್ಧ ನೆಟ್ಟಿಗರ ಆಕ್ರೋಶ, Video ವೈರಲ್

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿ ಚಿನ್ನದ ಖಜಾನೆ ಕಂಡು ED ಶಾಕ್; 21 ಕೆಜಿ ಗೋಲ್ಡ್ ಬಿಸ್ಕೇಟ್ ಜಪ್ತಿ

Israel attacks: ದೋಹಾದಲ್ಲಿ 'ಹಮಾಸ್' ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ! ಹೇಡಿತನ ಎಂದ ಕತಾರ್!

SCROLL FOR NEXT