ಚಲಿಸುತ್ತಿದ್ದ ಲಾರಿ ಕೆಳಗೆ ಬಿದ್ದು 40 ವರ್ಷದ ಮಾಧವಿ ಸಾವು 
ರಾಜ್ಯ

ಮಂಗಳೂರು: ಹೆದ್ದಾರಿಯಲ್ಲಿ ಗುಂಡಿ; ಲಾರಿ ಕೆಳಗೆ ಸಿಲುಕಿ ಮಹಿಳೆ ಸಾವು

ಹೆದ್ದಾರಿಯ ಕಳಪೆ ನಿರ್ವಹಣೆಗಾಗಿ ವಾಹನ ಚಾಲಕರಿಂದ ಪದೇ ಪದೆ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿಯೇ ಈ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.

ಮಂಗಳೂರು: ಇಲ್ಲಿನ ಕೂಳೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಯಿಂದಾಗಿ ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನವೊಂದು ಉರುಳಿಬಿದ್ದಿದ್ದು, ಚಲಿಸುತ್ತಿದ್ದ ಲಾರಿಯ ಕೆಳಗೆ ಬಿದ್ದು 40 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ಮಾಧವಿ ಎಂದು ಗುರುತಿಸಲಾಗಿದ್ದು, ರಸ್ತೆಯಲ್ಲಿರುವ ಗುಂಡಿಯಿಂದಾಗಿ ಮಾಧವಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿಬಿದ್ದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಮೀನು ಸಾಗಣೆ ಮಾಡುವ ಲಾರಿ ಮಾಧವಿ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.

ಹೆದ್ದಾರಿಯ ಕಳಪೆ ನಿರ್ವಹಣೆಗಾಗಿ ವಾಹನ ಚಾಲಕರಿಂದ ಪದೇ ಪದೆ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿಯೇ ಈ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.

ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಅಪಘಾತಕ್ಕೆ ರಸ್ತೆಯ ದುಸ್ಥಿತಿಯೇ ಕಾರಣ ಎಂದು ಆರೋಪಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ.

ಲಾರಿಯನ್ನು ವಶಪಡಿಸಿಕೊಂಡು ಚಾಲಕನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.

ತಕ್ಷಣವೇ ರಸ್ತೆ ದುರಸ್ತಿ ಪಡಿಸಲು ಈ ವಿಷಯವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ವರದಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ವಿರುದ್ಧ ಯುದ್ಧ ಮಾಡಿದರೆ ಸೋಲು ಖಚಿತ: ಪಾಕಿಸ್ತಾನಕ್ಕೆ ಮಾಜಿ CIA ಅಧಿಕಾರಿ ಎಚ್ಚರಿಕೆ

Maharashtra: ಮಹಿಳಾ ಡಾಕ್ಟರ್ ಆತ್ಮಹತ್ಯೆ ಪ್ರಕರಣ, ಓರ್ವನ ಬಂಧನ; ಪ್ರಮುಖ ಆರೋಪಿಗಾಗಿ ಪೊಲೀಸರ ಶೋಧ!

'ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ' ಶಿಷ್ಯರ ಬೀದಿ ಜಗಳ, ಕಿತ್ತಾಟಕ್ಕೆ ಬ್ರೇಕ್ ಹಾಕಲು ಎಂಟ್ರಿಯಾದ ಗುರು!

Kurnool Bus Fire- ಬಸ್ಸಿನ ಸೀಟುಗಳನ್ನು ಅಕ್ರಮವಾಗಿ ಸ್ಲೀಪರ್ ಕೋಚ್ ಆಗಿ ಮಾರ್ಪಡಿಸಲಾಗಿತ್ತು: ದಾಖಲೆಗಳಿಂದ ಬಹಿರಂಗ

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣ ಭೈರೇಗೌಡ ಅಚ್ಚರಿ ಹೇಳಿಕೆ !

SCROLL FOR NEXT