ಸಾಂದರ್ಭಿಕ ಚಿತ್ರ 
ರಾಜ್ಯ

The New Indian Express ವರದಿ ಫಲಶೃತಿ: ಗದಗ ಶಾಲೆಗೆ ಶೌಚಾಲಯ ನಿರ್ಮಿಸಲು ಬೆಂಗಳೂರಿನ ಸಂಸ್ಥೆ ಮುಂದು!

ವಕೀಲ್ ಹೌಸಿಂಗ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮೊಹ್ಸಿನ್ ಅಲಿ ವಕೀಲ್ ಈ ಲೇಖನ ನೋಡಿ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸುವ ಮೂಲಕ ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಗದಗ: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಫರಿಣಾಮದಿಂದ ಗದಗದ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ನಿರ್ಮಿಸಲು ಬೆಂಗಳೂರಿನ ಸಂಸ್ಥೆಯೊಂದು ಮುಂದಾಗಿದೆ. ಶಾಲೆಯಲ್ಲಿ ಶೌಚಾಲಯವಿಲ್ಲದ ಕಾರಣ ವಿದ್ಯಾರ್ಥಿಗಳು ಹೆದ್ದಾರಿ ದಾಟಿ ಹೋಗಬೇಕು ಎಂಬ ಶೀರ್ಷಿಕೆಯಡಿಯಲ್ಲಿ 'ನ್ಯೂ ​​ಸಂಡೇ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ ಭಾನುವಾರ ಲೇಖನ ಪ್ರಕಟಿಸಿತ್ತು.

ವಕೀಲ್ ಹೌಸಿಂಗ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮೊಹ್ಸಿನ್ ಅಲಿ ವಕೀಲ್ ಈ ಲೇಖನ ನೋಡಿ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸುವ ಮೂಲಕ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ವ್ಯವಸ್ಥಾಪಕ ಕಾರ್ಯದರ್ಶಿ ರಮೇಶ್ ಕುಮಾರ್ ಕರೆ ಮಾಡಿ ಅವಶ್ಯಕತೆಯ ಬಗ್ಗೆ ಮಾಹಿತಿ ಪಡೆದರು. ಎರಡು ಶೌಚಾಲಯಗಳನ್ನು ನಿರ್ಮಿಸಲು ಸಿದ್ಧರಿದ್ದು ಈಗ ಗುತ್ತಿಗೆದಾರರನ್ನು ಹುಡುಕುತ್ತಿರುವುದಾಗಿ ತಿಳಿಸಿದ್ದಾರೆ.

ಶೌಚಾಲಯವಿಲ್ಲದ ಮತ್ತು ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿಯನ್ನು ದಾಟಬೇಕಾದ ಸರ್ಕಾರಿ ಶಾಲೆಯ ಕಥೆಯನ್ನು ನಾವು ಓದಿದ್ದೇವೆ. ಹೆದ್ದಾರಿ ದಾಟುವ ವೇಳೆ ಹೆಚ್ಚಿನ ಅಪಾಯವಿದೆ. ಆದ್ದರಿಂದ ನಮ್ಮ ಸಂಸ್ಥೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮತ್ತು ಶೌಚಾಲಯಗಳನ್ನು ನಿರ್ಮಿಸಲು ನಿರ್ಧರಿಸಿದ್ದಾರೆ." ಹೊಂಬಳದಲ್ಲಿರುವ ವಿದ್ಯಾರ್ಥಿಗಳ ಪೋಷಕರಲ್ಲಿ ಒಬ್ಬರು, "ಯಾರಾದರೂ ಬಂದು ನಮಗೆ ಸಹಾಯ ಮಾಡಿದರೆ ನಮಗೆ ಸಂತೋಷವಾಗುತ್ತದೆ ಎಂದು ಕುಮಾರ್ ತಿಳಿಸಿದ್ದಾರೆ.

ನಮಗೆ ಶೌಚಾಲಯಗಳು ಬೇಕಾಗಿವೆ ಏಕೆಂದರೆ ಅನೇಕರು ಗೇಟ್ ಹೊರಗೆ ಹೋಗಿ ಜನನಿಬಿಡ ಹೆದ್ದಾರಿಯನ್ನು ದಾಟಬೇಕಾಗುತ್ತದೆ. ಆಸಕ್ತಿ ತೋರಿಸಿದ್ದಕ್ಕಾಗಿ ನಾವು ಕಂಪನಿಗೆ ಧನ್ಯವಾದ ಹೇಳುತ್ತೇವೆ ಮತ್ತು ಈ ವಿಷಯವನ್ನು ವರದಿ ಮಾಡಿದ್ದಕ್ಕಾಗಿ TNIE ಗೆ ಧನ್ಯವಾದ ಹೇಳುತ್ತೇವೆ ಎಂದು ಶಾಲಾ ಸಿಬ್ಬಂದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್