ಸಾಂದರ್ಭಿಕ ಚಿತ್ರ 
ರಾಜ್ಯ

The New Indian Express ವರದಿ ಫಲಶೃತಿ: ಗದಗ ಶಾಲೆಗೆ ಶೌಚಾಲಯ ನಿರ್ಮಿಸಲು ಬೆಂಗಳೂರಿನ ಸಂಸ್ಥೆ ಮುಂದು!

ವಕೀಲ್ ಹೌಸಿಂಗ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮೊಹ್ಸಿನ್ ಅಲಿ ವಕೀಲ್ ಈ ಲೇಖನ ನೋಡಿ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸುವ ಮೂಲಕ ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಗದಗ: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಫರಿಣಾಮದಿಂದ ಗದಗದ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ನಿರ್ಮಿಸಲು ಬೆಂಗಳೂರಿನ ಸಂಸ್ಥೆಯೊಂದು ಮುಂದಾಗಿದೆ. ಶಾಲೆಯಲ್ಲಿ ಶೌಚಾಲಯವಿಲ್ಲದ ಕಾರಣ ವಿದ್ಯಾರ್ಥಿಗಳು ಹೆದ್ದಾರಿ ದಾಟಿ ಹೋಗಬೇಕು ಎಂಬ ಶೀರ್ಷಿಕೆಯಡಿಯಲ್ಲಿ 'ನ್ಯೂ ​​ಸಂಡೇ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ ಭಾನುವಾರ ಲೇಖನ ಪ್ರಕಟಿಸಿತ್ತು.

ವಕೀಲ್ ಹೌಸಿಂಗ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮೊಹ್ಸಿನ್ ಅಲಿ ವಕೀಲ್ ಈ ಲೇಖನ ನೋಡಿ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸುವ ಮೂಲಕ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ವ್ಯವಸ್ಥಾಪಕ ಕಾರ್ಯದರ್ಶಿ ರಮೇಶ್ ಕುಮಾರ್ ಕರೆ ಮಾಡಿ ಅವಶ್ಯಕತೆಯ ಬಗ್ಗೆ ಮಾಹಿತಿ ಪಡೆದರು. ಎರಡು ಶೌಚಾಲಯಗಳನ್ನು ನಿರ್ಮಿಸಲು ಸಿದ್ಧರಿದ್ದು ಈಗ ಗುತ್ತಿಗೆದಾರರನ್ನು ಹುಡುಕುತ್ತಿರುವುದಾಗಿ ತಿಳಿಸಿದ್ದಾರೆ.

ಶೌಚಾಲಯವಿಲ್ಲದ ಮತ್ತು ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿಯನ್ನು ದಾಟಬೇಕಾದ ಸರ್ಕಾರಿ ಶಾಲೆಯ ಕಥೆಯನ್ನು ನಾವು ಓದಿದ್ದೇವೆ. ಹೆದ್ದಾರಿ ದಾಟುವ ವೇಳೆ ಹೆಚ್ಚಿನ ಅಪಾಯವಿದೆ. ಆದ್ದರಿಂದ ನಮ್ಮ ಸಂಸ್ಥೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮತ್ತು ಶೌಚಾಲಯಗಳನ್ನು ನಿರ್ಮಿಸಲು ನಿರ್ಧರಿಸಿದ್ದಾರೆ." ಹೊಂಬಳದಲ್ಲಿರುವ ವಿದ್ಯಾರ್ಥಿಗಳ ಪೋಷಕರಲ್ಲಿ ಒಬ್ಬರು, "ಯಾರಾದರೂ ಬಂದು ನಮಗೆ ಸಹಾಯ ಮಾಡಿದರೆ ನಮಗೆ ಸಂತೋಷವಾಗುತ್ತದೆ ಎಂದು ಕುಮಾರ್ ತಿಳಿಸಿದ್ದಾರೆ.

ನಮಗೆ ಶೌಚಾಲಯಗಳು ಬೇಕಾಗಿವೆ ಏಕೆಂದರೆ ಅನೇಕರು ಗೇಟ್ ಹೊರಗೆ ಹೋಗಿ ಜನನಿಬಿಡ ಹೆದ್ದಾರಿಯನ್ನು ದಾಟಬೇಕಾಗುತ್ತದೆ. ಆಸಕ್ತಿ ತೋರಿಸಿದ್ದಕ್ಕಾಗಿ ನಾವು ಕಂಪನಿಗೆ ಧನ್ಯವಾದ ಹೇಳುತ್ತೇವೆ ಮತ್ತು ಈ ವಿಷಯವನ್ನು ವರದಿ ಮಾಡಿದ್ದಕ್ಕಾಗಿ TNIE ಗೆ ಧನ್ಯವಾದ ಹೇಳುತ್ತೇವೆ ಎಂದು ಶಾಲಾ ಸಿಬ್ಬಂದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

ಎರಡೂವರೆ ವರ್ಷಗಳ ಕಾಂಗ್ರೆಸ್ ಆಡಳಿತ ಕನ್ನಡಿಗರಿಗೆ ಕೊಟ್ಟಿದ್ದು ಕೇವಲ ದೌರ್ಭಾಗ್ಯಗಳನ್ನ: ಆರ್.ಅಶೋಕ್

ಡಿ. 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆಗೆ BJP ಆಗ್ರಹ

SCROLL FOR NEXT