ಸತೀಶ್ ಸೈಲ್ 
ರಾಜ್ಯ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: 'ಕೈ' ಶಾಸಕ ಸತೀಶ್ ಸೈಲ್ ಬಂಧನ

ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಬಂಧಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸಿಐಅರ್ ದಾಖಲಿಸಿಕೊಂಡಿದ್ದ ಇ.ಡಿ ಸಹ ತನಿಖೆ ಆರಂಭಿಸಿತ್ತು. ಇದೇ ಆಗಸ್ಟ್‌ 13 ಮತ್ತು 14ರಂದು ಸತೀಶ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ರೂ.13 ಕೋಟಿಯಷ್ಟು ನಗದು ಮತ್ತು ಚಿನ್ನಾಭರಣ ವಶಕ್ಕೆ ಪಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸತೀಶ್‌ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಮಂಗಳವಾರ ಸೈಲ್ ಅವರು ಇಡಿಯ ಶಾಂತಿನಗರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಆದಾಗ್ಯೂ, ಅವರು ತನಿಖೆಗೆ ಸಹಕರಿಸದ ಕಾರಣ, ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಬಳಿಕ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯಲಾಯಿತು ಮತ್ತು ನಂತರ ತಡರಾತ್ರಿ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಎಂದು ಮೂಲಗಳು ಮಾಹಿತಿ ನೀಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video

ನೇಪಾಳ ಬಳಿಕ ಈಗ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಫ್ರಾನ್ಸ್ ಪ್ರಧಾನಿ!

ನೇಪಾಳದ ದಂಗೆ - ಇದು ಭಾರತ ಸ್ನೇಹಿ, ಚೀನಾ ವಿರೋಧಿ ಅಂದುಕೊಳ್ಳುವ ಮುಂಚೆ ಗಮನಿಸಬೇಕಾದ ಆಯಾಮಗಳು! (ತೆರೆದ ಕಿಟಕಿ)

'ಕಣ್ಣೀರಿನೊಂದಿಗೆ ಡ್ಯಾನ್ಸ್ ಮಾಡಲು ಸಾಧ್ಯವಿಲ್ಲ': ಪ್ರಧಾನಿ ಮೋದಿ ಸ್ವಾಗತಕ್ಕೆ ಕುಕಿ ಸಮುದಾಯ ವಿರೋಧ

'ನೇಪಾಳ ಪರಿಸ್ಥಿತಿ ನೋಡಿ': AAP ಶಾಸಕ ಮೆಹ್ರಾಜ್ ಮಲಿಕ್ ವಿರುದ್ಧ FIR ದಾಖಲಿಸಿದ್ದಕ್ಕೆ ಮುಫ್ತಿ ಆಕ್ರೋಶ, ಸರ್ಕಾರಕ್ಕೆ ಎಚ್ಚರಿಕೆ!

SCROLL FOR NEXT