ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ನೇಪಾಳದಲ್ಲಿ ಹಿಂಸಾಚಾರ: ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಸಿದ್ದರಾಮಯ್ಯ

ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ.

ಬೆಂಗಳೂರು: ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆ ಬೆನ್ನಲ್ಲೇ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ನೇಪಾಳ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯ ಕಾರ್ಯದರ್ಶಿಗಳು ಈ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಂಡಿದ್ದು, ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನೇಪಾಳದ ಕೆಪಿ ಓಲಿ ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಸರ್ಕಾರದಲ್ಲಿ ನೋಂದಾಯಿಸಲು ವಿಫಲವಾದ ಕಾರಣ ನೇಪಾಳ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು. ಈ ಆದೇಶದ ಬೆನ್ನಲ್ಲೇ ಸರ್ಕಾರದ ವಿರುದ್ಧ ಝೆನ್ ಜಿ ತಿರುಗಿ ಬಿದ್ದಿತ್ತು.

ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬ್ಯಾನ್‌ ಮಾಡಿದ್ದಕ್ಕೆ ಯುವ ಜನತೆ ಪ್ರತಿಭಟನೆಗೆ ಮುಂದಾದರು.

ಪೊಲೀಸ್‌, ಸೇನೆ ಯಾವುದಕ್ಕೂ ಹೆದರದೇ ಬೀದಿಗಿಳಿದು ಯುವ ಜನತೆ ಪ್ರತಿಭಟಿಸಿದರು. ಯುವಕರ ಹಿಂಸಾತ್ಮಕ ಪ್ರತಿಭಟನೆಗಳು ಕನಿಷ್ಠ 19 ಜನರ ಸಾವಿಗೆ ಕಾರಣವಾಯಿತು. ಜೊತೆಗೆ 300ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಪರಿಸ್ಥಿತಿ ಕೈಮೀರಿ ಹೋಗಬಹುದು ಎಂದು ತಿಳಿದು ಸರ್ಕಾರ, ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ನಿರ್ಧಾರವನ್ನು ಪ್ರಸ್ತುತ ಹಿಂತೆಗೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video

ನೇಪಾಳ ಬಳಿಕ ಈಗ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಫ್ರಾನ್ಸ್ ಪ್ರಧಾನಿ!

ನೇಪಾಳದ ದಂಗೆ - ಇದು ಭಾರತ ಸ್ನೇಹಿ, ಚೀನಾ ವಿರೋಧಿ ಅಂದುಕೊಳ್ಳುವ ಮುಂಚೆ ಗಮನಿಸಬೇಕಾದ ಆಯಾಮಗಳು! (ತೆರೆದ ಕಿಟಕಿ)

'ಕಣ್ಣೀರಿನೊಂದಿಗೆ ಡ್ಯಾನ್ಸ್ ಮಾಡಲು ಸಾಧ್ಯವಿಲ್ಲ': ಪ್ರಧಾನಿ ಮೋದಿ ಸ್ವಾಗತಕ್ಕೆ ಕುಕಿ ಸಮುದಾಯ ವಿರೋಧ

'ನೇಪಾಳ ಪರಿಸ್ಥಿತಿ ನೋಡಿ': AAP ಶಾಸಕ ಮೆಹ್ರಾಜ್ ಮಲಿಕ್ ವಿರುದ್ಧ FIR ದಾಖಲಿಸಿದ್ದಕ್ಕೆ ಮುಫ್ತಿ ಆಕ್ರೋಶ, ಸರ್ಕಾರಕ್ಕೆ ಎಚ್ಚರಿಕೆ!

SCROLL FOR NEXT