ಸಾಂದರ್ಭಿಕ ಚಿತ್ರ 
ರಾಜ್ಯ

Digital Arrest: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್ ಗೆ 30 ಲಕ್ಷ ರೂ ವಂಚನೆ!

ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್‌ಲೈನ್ ವಂಚಕರು ಜೆಟ್ ಏರ್ ವೇಸ್ ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿಎಂದು ಹೆದರಿಸಿದ್ದರು.

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಬೆದರಿಸಿದ ವಂಚಕರು 30.99 ಲಕ್ಷ ರೂ ಹಣ ದೋಚಿರುವ ಘಟನೆ ನಡೆದಿದೆ.

ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರು ಡಿಜಿಟಲ್ ಅರೆಸ್ಟ್‌ಗೆ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಬಿಐ, ಇ.ಡಿ ಹಾಗೂ ಜಡ್ಜ್ ಹೆಸರಿನಲ್ಲಿ ವಂಚಕರು ಮಾಜಿ ಶಾಸಕರಿಂದ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿದ್ದಾರೆ.

ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್‌ಲೈನ್ ವಂಚಕರು ಜೆಟ್ ಏರ್ ವೇಸ್ ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿ ಎಂದು ಹೆದರಿಸಿದ್ದರು.

ಆ.13ರಂದು ಸಿಬಿಐ ಡಿಸಿಪಿ ಎಂದು ಮತ್ತೋರ್ವ ಕರೆ ಮಾಡಿ, ‘ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ, ಕಾಲ್ ಕಟ್ ಮಾಡಬೇಡಿ’ ಎಂದು ಭಯ ಪಡಿಸಿದ್ದ. ಬಳಿಕ ಆನ್‌ಲೈನ್‌ನಲ್ಲಿ ಫೇಕ್ ಜಡ್ಜ್ ಮುಂದೆ ಹಾಜರು ಪಡಿಸಿದ್ದ ಖದೀಮರು ಕೋರ್ಟ್ ಹಾಲ್ ರೀತಿ ಸೆಟಪ್ ಮಾಡಿ ನಂಬಿಕೆ ಹುಟ್ಟಿಸಿದ್ದರು.

ಮುಂದಿನ ನಾಲ್ಕು ದಿನಗಳಲ್ಲಿ, ವಂಚಕರು ಅವರನ್ನು ವೀಡಿಯೊ ಕರೆಗಳ ಮೂಲಕ ಪದೇ ಪದೇ ಪ್ರಶ್ನಿಸಿದರು, ಅವರ ಕುಟುಂಬ, ಬ್ಯಾಂಕ್ ಮತ್ತು ಆಸ್ತಿ ವಿವರಗಳನ್ನು ಪಡೆದುಕೊಂಡರು. ನಮ್ಮದು ತಪ್ಪಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಿ ಎಂದು ಮೊದಲು 10 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದರು. ಬಳಿಕ ಪ್ರಾಪರ್ಟಿ ತನಿಖೆ ಮಾಡಬೇಕೆಂದು 20 ಲಕ್ಷ ರೂ. ಡೆಪಾಸಿಟ್ ಮಾಡಿಸಿಕೊಂಡಿದ್ದರು. ಹೀಗೆ ಆನ್‌ಲೈನ್‌ ವಂಚಕರ ಮಾತು ನಂಬಿ ಹಂತ-ಹಂತವಾಗಿ 30.99 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ.

ಹಣ ಹಾಕಿಸಿಕೊಂಡು ತನಿಖೆ ಮುಗಿದ ನಂತರ ಮರಳಿ ಕೊಡುವುದಾಗಿ ನಂಬಿಸಿದ್ದರು. ಹಣ ಮರಳಿ ಬಾರದಿದ್ದಾಗ ಮಾಜಿ ಶಾಸಕ ಗುಂಡಪ್ಪ ವಕೀಲ್ ಸಿಸಿಬಿ ಸೈಬರ್ ಕ್ರೈಂ (CCB) ಪೊಲೀಸರಿಗೆ ದೂರು ನೀಡಿದ್ದಾರೆ. ಗುಂಡಪ್ಪ ವಕೀಲ್ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಡಿ.26ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ. ಹೆಚ್ಚಳ!

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!

Pakistan: 17 ವರ್ಷ ಜೈಲು ಶಿಕ್ಷೆ ಹಿನ್ನೆಲೆ, ದೇಶಾದ್ಯಂತ ಬೀದಿಗಿಳಿದು ಹೋರಾಟಕ್ಕೆ ಸಜ್ಜಾಗಿ, ಇಮ್ರಾನ್ ಖಾನ್ ಕರೆ!

SCROLL FOR NEXT