ಕಿದ್ವಾಯಿ ಆಸ್ಪತ್ರೆ 
ರಾಜ್ಯ

ಬೆಂಗಳೂರು: ಕ್ಯಾನ್ಸರ್‌ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು; ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿ..!

ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕೈದಿಗೆ, ಜೈಲಿನ ವೈದ್ಯರ ಸಲಹೆ ಮೇರೆಗೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರು: ಕ್ಯಾನ್ಸರ್‌ ಚಿಕಿತ್ಸೆಗೆಂದು ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.

ಚೈತನ್ಯ ಕಲ್ಯಾಣಿ (34) ಪರಾರಿಯಾಗಿರುವ ಸಜಾಬಂದಿ. ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ವಿಜಯಪುರ ಜಿಲ್ಲಾ ಕಾರಾಗೃಹದಲ್ಲಿದ್ದ ಆತನನ್ನು ಆಗಸ್ಟ್‌ 3ರಂದು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.

ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕೈದಿಗೆ, ಜೈಲಿನ ವೈದ್ಯರ ಸಲಹೆ ಮೇರೆಗೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್, ಸೋಮವಾರ ಮಧ್ಯಾಹ್ನ 1.00 ರಿಂದ 1.15 ರ ನಡುವೆ ಆಸ್ಪತ್ರೆಯಿಂದ ಪರಾರಿ ಆಗಿದ್ದಾನೆ ಎಂದು ಮೂಲಗಳು ಹೇಳಿವೆ.

ಕೈದಿಯನ್ನು ಕರೆದುಕೊಂಡು ಬಂದ ಬೆಂಗಳೂರು ಕೇಂದ್ರ ಕಾರಾಗೃಹದ ವಾರ್ಡನ್ ವೈ.ಆರ್. ರಘು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಾಯಿ ಕ್ಯಾನ್ಸರ್ ನಿಂದಾಗಿ ಆತನಿಗೆ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ.. ತಪ್ಪಿಸಿಕೊಳ್ಳುವಾಗ, ಮೂವರು ನರ್ಸ್‌ಗಳು ಅವನನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆತ ಬೆದರಿಸಿ ಪರಾರಿಯಾಗಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ, ವಾರ್ಡನ್ ವೈ.ಆರ್.ರಘು ಸ್ಥಳದಲ್ಲಿರಲಿಲ್ಲ ಎಂಬುದು ತಿಳಿದುಬಂದಿದೆ, ನಿರ್ಲಕ್ಷ್ಯ ಹಿನ್ನೆಲೆಯಲ್ಲಿ ರಘು ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೈದಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಕಾನೂನುಬದ್ಧ ಬಂಧನವನ್ನು ವಿರೋಧಿಸುವುದು ಅಥವಾ ಅಡ್ಡಿಪಡಿಸುವುದು) ಸೆಕ್ಷನ್ 262 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'vote chori': ರಾಜ್ಯದ 1.12 ಕೋಟಿ ಜನರಿಂದ 'ಕೈ' ಸಹಿ ಸಂಗ್ರಹ, ನ.10ಕ್ಕೆ ಹೈಕಮಾಂಡ್'ಗೆ ಸಲ್ಲಿಕೆ

ಕಬ್ಬು ಬೆಳೆಗಾರರ ಹೋರಾಟ ಬೇರೆ ರಾಜ್ಯಗಳಲ್ಲೇಕಿಲ್ಲ?: ರಾಜ್ಯಕ್ಕೆ ಕೇಂದ್ರ ಸರ್ಕಾರ ಪ್ರಶ್ನೆ

ಮೂಲಸೌಕರ್ಯ ಸಮಸ್ಯೆ ಸರಿಪಡಿಸಲಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ: ಡಿಕೆ.ಶಿವಕುಮಾರ್'ಗೆ ಆರ್.ಅಶೋಕ್

ಗದಗ-ಬೆಟಗೇರಿ: ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದಾಗ ಉಸಿರಾಡಿ ಅಚ್ಚರಿ ಮೂಡಿಸಿದ ವ್ಯಕ್ತಿ !

ಭದ್ರಾ ಕಾಲುವೆಗೆ ಬಿದ್ದ ಕಾರು: ಇಬ್ಬರು ಜಲಸಮಾಧಿ, ನಾಲ್ವರು ಪಾರು

SCROLL FOR NEXT