ವಿನಯ್ ಕುಲಕರ್ಣಿ 
ರಾಜ್ಯ

ಅಪಘಾತಕ್ಕೀಡಾದ ಪುತ್ರನಿಗೆ ಶಸ್ತ್ರಚಿಕಿತ್ಸೆ: ಶಾಸಕ ವಿನಯ್‌ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು!

ತಮ್ಮ ಮಗ ಹೇಮಂತ್ ಗೆ ಅಪಘಾತವಾಗಿದ್ದರಿಂದ ಆತನ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿದ್ದು ತಮಗೆ ಜಾಮೀನು ನೀಡಬೇಕು ಎಂದು ಕೋರಿ ಶಾಸಕ ವಿನಯ್ ಅವರು ಮರಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ತಮ್ಮ ಮಗ ಹೇಮಂತ್ ಗೆ ಅಪಘಾತವಾಗಿದ್ದರಿಂದ ಆತನ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿದ್ದು ತಮಗೆ ಜಾಮೀನು ನೀಡಬೇಕು ಎಂದು ಕೋರಿ ಶಾಸಕ ವಿನಯ್ ಅವರು ಮರಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೇವಲ ಎರಡು ದಿನಗಳವರೆಗೆ ಮಾತ್ರ ಜಾಮೀನು ಮಂಜೂರು ಮಾಡಿದೆ. ಮರಳಿ ವಿನಯ್ ಕುಲಕರ್ಣಿ ಅವರು ಸೆ.11ರ ಸಂಜೆ 5ಕ್ಕೆ ಸಿಬಿಐ ಅಧಿಕಾರಿಗಳ ಎದುರು ಹಾಜರಾಗಿ ಮರಳಿ ಜೈಲು ಸೇರಬೇಕಿದೆ.

ಸದ್ಯ ಎರಡು ದಿನಗಳ ಕಾಲ ಜಾಮೀನು ಸಿಕ್ಕಿರುವ ವಿನಯ್ ಕುಲಕರ್ಣಿ ಅವರನ್ನು ಮಂಗಳವಾರ ಸಂಜೆಯೇ ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿನಯ್ ಕುಲಕರ್ಣಿ ಅವರ ಪುತ್ರ ಹೇಮಂತ್ ಅವರ ಕಾಲಿನ ಶಸ್ತ್ರ ಚಿಕಿತ್ಸೆ ಬೆಂಗಳೂರಿನಲ್ಲೇ ನಡೆಯುವುದರಿಂದ ವಿನಯ್ ಅವರು ಬೆಂಗಳೂರಿನಲ್ಲೇ ಉಳಿಯಬೇಕಾಗಿದೆ.

ಜಾಮೀನು ಸಿಕ್ಕಿರುವ ಈ ಎರಡು ದಿನಗಳ ಅವಧಿಯಲ್ಲಿ ಯಾವುದೇ ಸಭೆ ಮಾಡುವಂತಿಲ್ಲ ಎಂದು ಶಾಸಕ ವಿನಯ್‌ಗೆ ನ್ಯಾಯಾಲಯ ಸೂಚನೆ ನೀಡಿದೆ

ಈ ಹಿಂದೆ ಸಿಬಿಐನಿಂದ ಬಂಧಿತರಾಗಿ ಸೆರೆವಾಸ ಅನುಭವಿಸಿದ್ದ ವಿನಯ್ ಕುಲಕರ್ಣಿ, ಜಾಮೀನಿನ ಮೇಲೆ ಹೊರ ಬಂದು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಆದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಲಯ ಇವರ ಜಾಮೀನು ರದ್ದು ಮಾಡಿದ್ದರಿಂದ ಮರಳಿ ಅವರು ಪರಪ್ಪನ ಅಗ್ರಹಾರ ಸೇರಬೇಕಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT