ರಾಜ್ಯ

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ; BMTC ಡ್ರೈವರ್ ತಾತ್ಕಾಲಿಕ ವಜಾ; ಮುತ್ತಿಕ್ಕುವಂತೆ ಪೀಡಿಸಿದ ಚಾಲಕ ಆರೀಫ್‍ಗೆ ಧರ್ಮದೇಟು! Video

ಚಾಲಕ ಮತ್ತು ಮಹಿಳಾ ಪ್ರಯಾಣಿಕರ ನಡುವೆ ತೀವ್ರ ಜಗಳವಾಗಿದ್ದು ನಂತರ ಚಾಲಕ ಮಹಿಳೆ ಕಪಾಳಕ್ಕೆ ಹೊಡೆದಿದ್ದಾನೆ.

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಚಾಲಕ ರವಿ ಎಂಬಾತನನ್ನು ತಾತ್ಕಾಲಿಕವಾಗಿ ವಜಾ ಮಾಡಲಾಗಿದೆ. ಚಾಲಕ ಮತ್ತು ಮಹಿಳಾ ಪ್ರಯಾಣಿಕರ ನಡುವೆ ತೀವ್ರ ಜಗಳವಾಗಿದ್ದು ನಂತರ ಚಾಲಕ ಮಹಿಳೆ ಕಪಾಳಕ್ಕೆ ಹೊಡೆದಿದ್ದಾನೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಮೊದಲಿಗೆ ಮಹಿಳೆ ಚಾಲಕನ ಮೇಲೆ ಕೈ ಎತ್ತಿದ್ದಾಳೆ ಕೂಡಲೇ ಚಾಲಕ ತಡಮಾಡದೆ ಮಹಿಳೆಗೆ ಹೊಡೆದಿದ್ದಾನೆ. ಇದರಿಂದಾಗಿ ವಾತಾವರಣ ಉದ್ವಿಗ್ನಗೊಳ್ಳುತ್ತದೆ.

ಈ ಸಂಪೂರ್ಣ ಘಟನೆಯನ್ನು ಬಸ್‌ನ ಹೊರಗೆ ಇದ್ದ ವ್ಯಕ್ತಿಯೊಬ್ಬರು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದ್ದಾರೆ. ಬಸ್‌ನ ಹೊರಗಿನಿಂದ ರೆಕಾರ್ಡ್ ಮಾಡಲಾದ ಈ ವೀಡಿಯೊದಲ್ಲಿ, ವಾಹನ ಸಂಖ್ಯೆ KA51AK4276 ಎಂದು ಬರೆಯಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಎಂಟಿಸಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಚಾಲಕ ರವಿಯನ್ನು ತಾತ್ಕಾಲಿಕವಾಗಿ ವಜಾ ಮಾಡಿದೆ.

ಮತ್ತೊಂದೆಡೆ, ಖಾಸಗಿ ಬಸ್​​ ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್ ಕೋಚ್ ಬಸ್​ ನಲ್ಲಿ ಬರುತ್ತಿದ್ದ ಅಪ್ರಾಪ್ತೆಗೆ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ಕುಟುಂಬಸ್ಥರು ಬೆಂಗಳೂರಿನ ಚಾಲುಕ್ಯ ಸರ್ಕಲ್‌ ಬಳಿ ಬಸ್​ ನಿಲ್ಲಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಾಲಕಿ ಡ್ರೈವರ್ ಸೀಟ್ ಬಳಿ ತನ್ನ ಮೊಬೈಲ್ ಚಾರ್ಚ್ ಹಾಕಿದ್ದಳು.

ಮೊಬೈಲ್ ಹಿಂಪಡೆಯಲು ಹೋಗಿದ್ದಾಗ ಹೆಚ್ಚುವರಿ ಚಾಲಕ ಆರೀಫ್ ಬಾಲಕಿಗೆ ಮುತ್ತು ಕೊಡುವಂತೆ ಒತ್ತಾಯಿಸಿದ್ದಾನೆ. ಮುತ್ತು ಕೊಟ್ಟರೆ ಮಾತ್ರ ಮೊಬೈಲ್ ಕೊಡುತ್ತೇನೆ ಎಂದು ಆತ ಪೀಡಿಸಿದ್ದಾನೆ. ಕೊನೆಗೆ ಬಾಲಕಿ ಮೊಬೈಲ್ ತೆಗೆದುಕೊಂಡು ತನ್ನ ಅಣ್ಣನಿಗೆ ಕರೆ ಮಾಡಿ ನಡೆದ ಘಟನೆ ತಿಳಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಪೋಷಕರು ಬಸ್ ಚಾಲುಕ್ಯ ಸರ್ಕಲ್ ಬಳಿ ಬರುತ್ತಿದ್ದಂತೆಯೇ ನಿಲ್ಲಿಸಿ ಚಾಲಕ ಆರೀಫ್​​ ನ ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ!

ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ; ನಾಳೆ ಬಿಹಾರ ನೂತನ ಸಿಎಂ ಆಗಿ ಪ್ರಮಾಣ

ಇಸ್ಲಾಂನಲ್ಲಿ 'ಆತ್ಮಾಹುತಿ' ದಾಳಿ ಹರಾಮ್, ಅಮಾಯಕರ ಹತ್ಯೆ ಗಂಭೀರ ಪಾಪ : ಅಸಾದುದ್ದೀನ್ ಓವೈಸಿ

'ಯಕ್ಷಗಾನ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ': KDA ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೊಟ್ಟ ಸ್ಪಷ್ಟನೆಯೇನು?

ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಆರೋಪಿ ಅನ್ಮೋಲ್ ಬಿಷ್ಣೋಯ್‌ ಅಮೆರಿಕದಿಂದ ಗಡಿಪಾರು; ಭಾರತಕ್ಕೆ ಕರೆತಂದು ಬಂಧನ!

SCROLL FOR NEXT