ಜೈಲಿನ ವಾರ್ಡನ್ ಕಲ್ಲಪ್ಪ ಹೆಚ್ ಅಬಾಚಿ 
ರಾಜ್ಯ

ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ: ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್​ ಬಂಧನ

ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಿದ್ದ ಜೈಲಿನ ವಾರ್ಡನ್ ಕಲ್ಲಪ್ಪ ಹೆಚ್ ಅಬಾಚಿ ಎಂಬಾತನನ್ನು ಬಂಧನಕ್ಕೊಳಪಡಿಸಲಾಗಿದೆ. ಈತನಿಂದ 1 ಲಕ್ಷ ರೂ. ಮೌಲ್ಯದ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಲಾಗಿದೆ.

ಬೆಂಗಳೂರು: ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್‌ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್‌ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಪರಪ್ಪನ ಅಗ್ರಹಾರ ಮತ್ತೆ ಸುದ್ದಿಯಲ್ಲಿದ್ದು ಜೈಲು ವಾರ್ಡನ್​ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗಿದೆ ಎಂಬುದು ಬಹಿರಂಗಗೊಂಡಿದೆ.

ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಿದ್ದ ಜೈಲಿನ ವಾರ್ಡನ್ ಕಲ್ಲಪ್ಪ ಹೆಚ್ ಅಬಾಚಿ ಎಂಬಾತನನ್ನು ಬಂಧನಕ್ಕೊಳಪಡಿಸಲಾಗಿದೆ. ಈತನಿಂದ 1 ಲಕ್ಷ ರೂ. ಮೌಲ್ಯದ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಲಾಗಿದೆ.

ಮಾಜಿ ಸೈನಿಕನಾಗಿರುವ ಕಲ್ಲಪ್ಪ, ಭಾರತೀಯ ಸೇನೆಯಿಂದ ಸ್ವಯಂಪ್ರೇರಿತ ನಿವೃತ್ತಿ ಪಡೆದು 2018 ರಲ್ಲಿ ಮಾಜಿ ಸೈನಿಕ ಕೋಟಾದಡಿಯಲ್ಲಿ ಕಾರಾಗೃಹ ಸೇವೆಗೆ ಸೇರ್ಪಡೆಗೊಂಡಿದ್ದ. ಈತ ಈ ಹಿಂದೆ ಧಾರವಾಡ ಜೈಲಿನಲ್ಲಿ ವಾರ್ಡರ್ ಆಗಿ ಸೇವೆ ಸಲ್ಲಿಸಿದ್ದು, ಮೂರು ತಿಂಗಳ ಹಿಂದಷ್ಟೇ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆಗೊಂಂಡಿದ್ದ ಎಂದು ತಿಳಿದುಬಂದಿದೆ.

ಭಾನುವಾರ ರಾತ್ರಿ ಜೈಲಿನ ಡ್ಯೂಟಿಗೆ ಬರುವ ವೇಳೆ ಸಿಐಎಸ್​​ಎಫ್​​ ಸಿಬ್ಬಂದಿಗಳಿಂದ ಪ್ರವೇಶ ದ್ವಾರದ ಬಳಿ ಕಲ್ಲಪ್ಪ ಅವರನ್ನು ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಜೇಬಿನಲ್ಲಿ ತಂಬಾಕು ಮತ್ತು ಆಶಿಶ್ ಆಯಿಲ್ ಪತ್ತೆ ಆಗಿದೆ.

ಬಳಿಕ ಕಲ್ಲಪ್ಪನನ್ನು ಬಂಧಿಸಿದ ಪೊಲೀಸರು ಆತನಿಂದ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಿದ್ದಾರೆ. ಇದೀಗ ಈತನ ವಿರುದ್ಧ ಎನ್'ಡಿಪಿಎಸ್ ಕಾಯ್ದೆ ಮತ್ತು ಕರ್ನಾಟಕ ಕಾರಾಗೃಹ ಕಾಯ್ದೆಯ ಸೆಕ್ಷನ್ 42 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕಲ್ಲಪ್ಪ ಯಾರಿಗಾಗಿ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂಬುದನ್ನು ಪತ್ತೆ ಮಾಡಲು ವಿಚಾರಣೆ ನಡೆಸಲಾಗುತ್ತಿದೆ. ಬಂಧನದ ನಂತರ ಆರೋಪಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಜೈಲು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ NI-MO ಮೋಡಿ: NDA ಪ್ರಚಂಡ ಗೆಲುವು; ಅತಿದೊಡ್ಡ ಪಕ್ಷವಾಗಿ BJP; ಕುಸಿದ ತೇಜಸ್ವಿ ಯಾದವ್; Congress ಸ್ಥಿತಿ ಹೀನಾಯ!

Bihar Election Results 2025: ಬಿಹಾರದ ಅಲಿನಗರ ಕ್ಷೇತ್ರದಲ್ಲಿ ಇತಿಹಾಸ ನಿರ್ಮಿಸಿದ BJP ಅಭ್ಯರ್ಥಿ ಮೈಥಿಲಿ ಠಾಕೂರ್!

ಬಿಹಾರದಲ್ಲಿ 'Congress' ಹೀನಾಯ ಹಿನ್ನಡೆ: 'ಸೋಲಿನ ಸರದಾರ' ರಾಹುಲ್ ಗಾಂಧಿಗೆ ಇದು '95ನೇ ಸೋಲು'!

Video: ಕಂಬಳಿ ಹೊದ್ದು ದಂಪತಿಗಳ 'ಕಾಮಕೇಳಿ', ಪೊದೆಯಲ್ಲಿ ಮತ್ತೊಂದು ಜೋಡಿಯ 'ಕಳ್ಳಾಟ': ಜಿಲ್ಲಾಸ್ಪತ್ರೆ ವಿರುದ್ಧ ಕೆಂಗಣ್ಣು

Bihar Elections 2025: ಸೋಲಿನಲ್ಲೂ ದಾಖಲೆ ಬರೆದ ಕಾಂಗ್ರೆಸ್; ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದ ಕ್ಷೇತ್ರಗಳಲ್ಲಿ ಶೇ.100 ಸೋಲು!

SCROLL FOR NEXT