ಪ್ರತ್ಯಕ್ಷ ದೃಶ್ಯ 
ರಾಜ್ಯ

ಹಾಸನದಲ್ಲಿ ಘೋರ ಘಟನೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, ಮುಗಿಲು ಮುಟ್ಟಿದ ಆಕ್ರಂದನ; Video Viral!

ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಇನ್ನು ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ಕ್ಯಾಂಟರ್ ನುಗ್ಗಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. 10 ಮಂದಿ ಸ್ಥಿತಿ ಗಂಭೀರವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

T20 ವಿಶ್ವಕಪ್ 2026: ಇತಿಹಾಸ ಬರೆದ ಭಾರತ.. ಅತೀ ದೊಡ್ಡ ಜಯ, ಜಗತ್ತಿನ ಯಾವ ತಂಡವೂ ಮಾಡದ ದಾಖಲೆ!

T20 ವಿಶ್ವಕಪ್ 2026: ಗುರು ದೇವೋ ಭವ.. ಮಾಜಿ ಕೋಚ್ Gary Kirsten ಬಿಗಿದಪ್ಪಿದ ಹಾರ್ದಿಕ್ ಪಾಂಡ್ಯಾ!

ಮಹಾಶಿವರಾತ್ರಿ: ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ

T20 ವಿಶ್ವಕಪ್ 2026: ಭಾರತ ಭರ್ಜರಿ ಬೌಲಿಂಗ್, ನಮೀಬಿಯಾ ವಿರುದ್ಧ 93 ರನ್ ಜಯ

SCROLL FOR NEXT