ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ 
ರಾಜ್ಯ

ಮದ್ದೂರು ಗಣೇಶ ಮೆರವಣಿಗೆ ಕಲ್ಲು ತೂರಾಟ ಕೇಸು: ASP ತಿಮ್ಮಯ್ಯ ವರ್ಗಾವಣೆ

ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮಂಡ್ಯ: ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಗೃಹ ಇಲಾಖೆ ವರ್ಗಾವಣೆ ಮಾಡಿ ಇನ್ನೂ ತಿಮ್ಮಯ್ಯ ಅವರಿಗೆ ಜಾಗ ತೋರಿಸಿಲ್ಲ.ನವೀನ್ ಕುಮಾರ್ ಅವರು ತಕ್ಷಣವೇ ಮಂಡ್ಯ ಜಿಲ್ಲೆಯ ಹೆಚ್ಚುವರಿ ಎಸ್‌ಪಿ-1 ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಮದ್ದೂರು ಪ್ರಕರಣದಲ್ಲಿ ತಿಮ್ಮಯ್ಯಗೆ ಹೆಚ್ಚುವರಿ ಜವಾಬ್ದಾರಿ ನೀಡಿಯೇ ಇರಲಿಲ್ಲ. ಹೀಗಿದ್ದರೂ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಲ್ಲು ತೂರಾಟ ತಡೆಯಬೇಕಿದ್ದು ಮದ್ದೂರು ಇನ್‌ಸ್ಪೆಕ್ಟರ್‌ ಹಾಗೂ ಇತರ ಪೊಲೀಸರ ಕರ್ತವ್ಯವಾಗಿತ್ತು. ಸೋಮವಾರ ಪ್ರತಿಭಟನೆ ಬಂದೋಬಸ್ತ್ ನೇತೃತ್ವ ವಹಿಸಿದ್ದು ಎಸ್ಪಿ. ಹೀಗಿದ್ದರೂ ಸಹ ಅಮಾಯಕ ಅಧಿಕಾರಿಯನ್ನು ಸರ್ಕಾರ ಬಲಿಪಶು ಮಾಡಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರ ನಿರ್ಧಾರ, ಸೆ.22ರಿಂದ ಸರ್ವೇ ಆರಂಭ: ಸಿಎಂ ಸಿದ್ದರಾಮಯ್ಯ

Nepal Unrest: ಕಠ್ಮಂಡು ಬಳಿ ಭಾರತೀಯ ಪ್ರವಾಸಿಗರಿದ್ದ ಬಸ್ ಮೇಲೆ ಕಲ್ಲು ತೂರಾಟ, ಕಿಟಕಿಗಳು ಪುಡಿ ಪುಡಿ, ಅನೇಕ ಮಂದಿಗೆ ಗಾಯ

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ: ರಾಜೀನಾಮೆ ನಂತರ ಮೊದಲ ಬಾರಿಗೆ ಕಾಣಿಸಿಕೊಂಡ ಧಂಕರ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಕೇಸ್: ಸ್ಥಳ ಮಹಜರು ಸಮಯದಲ್ಲಿ ಹಲವು ಅಸ್ಥಿಪಂಜರಗಳ ನೋಡಿದ್ದೇನೆಂದ ಸೌಜನ್ಯಾ ಮಾವ..!

ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ

SCROLL FOR NEXT