ಸಿದ್ದರಾಮಯ್ಯ ನಿವಾಸದ ಬಳಿ ಹೊತ್ತಿ ಉರಿದ ಕಾರು 
ರಾಜ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಹೊತ್ತಿ ಉರಿದ ಕಾರು!

ಇಂದು ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್‌ ಎಂಜಿನಿಯರ್‌ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ' ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ.

ಇಂದು ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್‌ ಎಂಜಿನಿಯರ್‌ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಾಫ್ಟ್ ವೇರ್‌ ಎಂಜಿನಿಯರ್‌ ಸಚಿನ್‌ ಎಂಬುವವರು ಕಾರಿನಲ್ಲಿ ಕೋರಮಂಗಲದಿಂದ ಗಂಗಾನಗರದಲ್ಲಿರುವ ಸಬ್‌ರಿಜಿಸ್ಟ್ರರ್‌ ಕಚೇರಿಗೆ ಆಸ್ತಿ ನೋಂದಣಿಗಾಗಿ ತೆರಳುತ್ತಿದ್ದರು. ಸಿಎಂ ಮನೆ ಸಮೀಪದ ಅರಮನೆ ರಸ್ತೆಯ ವಿಲ್ಸನ್‌ ಮ್ಯಾನರ್‌ ಸೇತುವೆಯ ಸರ್ವೀಸ್‌ ರಸ್ತೆಯಲ್ಲಿ ಕಾರಿನ ಮುಂಭಾಗದ ಎಂಜಿನ್‌ನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದೆ.

ತಕ್ಷಣ ಚಾಲಕ ಅಪಾಯ ಅರಿತು ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಸಚಿನ್‌ ಹಾಗೂ ಚಾಲಕ ಇಬ್ಬರೂ ಕಾರಿನಿಂದ ಇಳಿದಿದ್ದಾರೆ. ಚಾಲಕ ಕಾರಿನ ಮುಂದಿನ ಬಾನೆಟ್‌ ತೆಗೆಯುತ್ತಿದ್ದಂತೆಯೇ ಬೆಂಕಿ ಆವರಿಸಿದ್ದರಿಂದ ಅವರು ಹಿಂದೆ ಸರಿದಿದ್ದಾರೆ. ಸಚಿನ್‌ ಅವರು ಎಚ್ಚೆತ್ತುಕೊಂಡು ಕಾರಿನಲ್ಲಿದ್ದ ದಾಖಲೆ ಮತ್ತು ಕೆಲ ವಸ್ತುಗಳನ್ನು ಹೊರಗೆ ತೆಗೆದುಕೊಂಡಿದ್ದಾರೆ.

ನೋಡ ನೋಡುತ್ತಿದ್ದಂತೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಕಾರಿನ ಟೈರ್ ಮತ್ತು ಡೀಸೆಲ್ ಟ್ಯಾಂಕ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಸಿಎಂ ನಿವಾಸದ ಸಮೀಪ ನಡೆದ ಈ ಘಟನೆ ತೀವ್ರ ಆತಂಕಕ್ಕೆ ಕಾರಣವಾಯಿತು.

ಹೈಗ್ರೌಂಡ್ಸ್ ಠಾಣೆ ಪೊಲೀಸರು ಸುಟ್ಟು ಹೋದ ಕಾರನ್ನು ಅಲ್ಲಿಂದ ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್