ಭಾರೀ ಮಳೆ ಮತ್ತು ಗಾಳಿಗೆ ರಾಜಾಜಿನಗರದಲ್ಲಿ ಧರೆಗುರುಳಿದ ಭಾರೀ ಗಾತ್ರದ ಮರ. 
ರಾಜ್ಯ

ಭಾರೀ ಮಳೆಗೆ ನಗರದಲ್ಲಿ 16 ಮರಗಳು ಧರೆಗೆ: ಹಲವೆಡೆ ಸಂಚಾರ ಅಸ್ತವ್ಯಸ್ತ

ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದ ರಸ್ತೆಯಲ್ಲಿ ಮರ ಬಿದ್ದು ಸುಮನಹಳ್ಳಿ ಕಡೆಗೆ ಸಾಗುವ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬೆಂಗಳೂರು: ಬುಧವಾರ ತಡರಾತ್ರಿ ನಗರದಲ್ಲಿ 52.8 ಮಿಮೀ ಮಳೆಯಾಗಿದ್ದು, ಭಾರೀ ಮಳೆಗೆ 16 ಮರಗಳು ಧರೆಗುರುಳಿ ಹಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಅರಣ್ಯ ವಿಭಾಗದಲ್ಲಿ 52 ದೂರುಗಳು ದಾಖಲಾಗಿದ್ದು, 36 ಮರದ ಕೊಂಬೆಗಳು ಧರೆಗುರುಳಿವೆ. ರಾಜಾಜಿನಗರದ 4ನ ಬ್ಲಾಕ್ ನಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮ 5 ಕಾರುಗಳು, ಒಂಟು ಟಾಟಾ ಏಸ್ ಮತ್ತು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು 3 ದ್ವಿಚಕ್ರ ವಾಹನಗಳು, ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್'ನ್ನು ಹಾನಿಗೊಳಿಸಿದೆ ಎಂದು ತಿಳಿದುಬಂದಿದೆ.

ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದ ರಸ್ತೆಯಲ್ಲಿ ಮರ ಬಿದ್ದು ಸುಮನಹಳ್ಳಿ ಕಡೆಗೆ ಸಾಗುವ ಸಂಚಾರದ ಮೇಲೆ ಪರಿಣಾಮ ಬೀರಿತ್ತು.

ಕಸ್ತೂರಿನಗರ, ಹೆಬ್ಬಾಳ, ದೊಮ್ಮಲೂರಿನ ಬಳಿಯ ಎಸಿಎಸ್ ಸೆಂಟರ್, ವರ್ತೂರು-ಗುಂಜೂರು ರಸ್ತೆ, ಹೊರಮಾವು ಮತ್ತು ಹೆಬ್ಬಾಳ ಮುಂತಾದ ಹಲವಾರು ಪ್ರದೇಶಗಳಲ್ಲಿ, ರಸ್ತೆಗಳಲ್ಲಿ ನೀರು ನಿಂತ ಕಾರಣ ಸಂಚಾರ ನಿಧಾನವಾಗಿತ್ತು. ಇದಲ್ಲದೆ, ಅಂಡರ್‌ಪಾಸ್‌ಗಳಲ್ಲಿ ನೀರು ತುಂಬಿ ಸಂಚಾರ ದಟ್ಟಣೆ ಸಮಸ್ಯೆಗಳು ಕಂಡು ಬಂದಿತ್ತು. ತಗ್ಗು ಪ್ರದೇಶಗಳಲ್ಲಿನ ಕೆಲವು ಮನೆಗಳಿಗೂ ನೀರು ನುಗ್ಗಿ, ಜನರು ಸಮಸ್ಯೆ ಎದುರಿಸುವಂತಾಗಿತ್ತು.

ಹೊರಮಾವುವಿನ ಸಾಯಿ ಲೇಔಟ್‌ನಲ್ಲಿ ನೀರು ನಿಲ್ಲದಂತೆ ಮಾಡಲು ಆಯುಕ್ತ ಡಿ ಎಸ್ ರಮೇಶ್ ಅವರು 13.36 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಕಾರ್ಯಗಳನ್ನು ಪರಿಶೀಲಿಸಿದರು,

ಕಾಮಗಾರಿ ವೇಳೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಆಯುಕ್ತರು ನಿರ್ದೇಶಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದೇಶ ಹಿಂಸಾಚಾರ: ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ: ICT ತೀರ್ಪು

INDI ಮೈತ್ರಿಕೂಟದಲ್ಲಿ ಭಾರಿ ಭಿನ್ನಮತ: ಸಾಕಪ್ಪಾ ಸಾಕು ಕಾಂಗ್ರೆಸ್, ರಾಹುಲ್ ಸಹವಾಸ; ಅಖಿಲೇಶ್ ನೇತೃತ್ವ ವಹಿಸಲಿ!: ಹೆಚ್ಚಾದ ಒತ್ತಡ

Delhi Blast: 'ವೈಟ್ ಕಾಲರ್' ಉಗ್ರ ಜಾಲ: ಹರಿಯಾಣದ ವೈದ್ಯೆ ಪ್ರಿಯಾಂಕಾ ಶರ್ಮಾ ವಿಚಾರಣೆ, ಯಾರು ಈಕೆ?

'IPL ನಲ್ಲಿ ನಾಯಕತ್ವದ ನಿರಂತರ ಪ್ರಶ್ನೆಯಿಂದಾಗಿ ನಾನು ಸ್ಪೆಷಲಿಸ್ಟ್ ಬ್ಯಾಟರ್ ಆದೆ': ಗೋಯೆಂಕಾ ಪ್ರಕರಣದ ಕುರಿತು ಕೊನೆಗೂ ಮೌನ ಮುರಿದ KL Rahul

6 ವರ್ಷಗಳ ನಂತರ ಭಾರತ - ಚೀನಾ ನಡುವೆ ಏರ್ ಇಂಡಿಯಾ ವಿಮಾನ ಸೇವೆ ಪುನರಾರಂಭ

SCROLL FOR NEXT