ಭಾರೀ ಮಳೆ ಮತ್ತು ಗಾಳಿಗೆ ರಾಜಾಜಿನಗರದಲ್ಲಿ ಧರೆಗುರುಳಿದ ಭಾರೀ ಗಾತ್ರದ ಮರ. 
ರಾಜ್ಯ

ಭಾರೀ ಮಳೆಗೆ ನಗರದಲ್ಲಿ 16 ಮರಗಳು ಧರೆಗೆ: ಹಲವೆಡೆ ಸಂಚಾರ ಅಸ್ತವ್ಯಸ್ತ

ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದ ರಸ್ತೆಯಲ್ಲಿ ಮರ ಬಿದ್ದು ಸುಮನಹಳ್ಳಿ ಕಡೆಗೆ ಸಾಗುವ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬೆಂಗಳೂರು: ಬುಧವಾರ ತಡರಾತ್ರಿ ನಗರದಲ್ಲಿ 52.8 ಮಿಮೀ ಮಳೆಯಾಗಿದ್ದು, ಭಾರೀ ಮಳೆಗೆ 16 ಮರಗಳು ಧರೆಗುರುಳಿ ಹಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಅರಣ್ಯ ವಿಭಾಗದಲ್ಲಿ 52 ದೂರುಗಳು ದಾಖಲಾಗಿದ್ದು, 36 ಮರದ ಕೊಂಬೆಗಳು ಧರೆಗುರುಳಿವೆ. ರಾಜಾಜಿನಗರದ 4ನ ಬ್ಲಾಕ್ ನಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮ 5 ಕಾರುಗಳು, ಒಂಟು ಟಾಟಾ ಏಸ್ ಮತ್ತು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು 3 ದ್ವಿಚಕ್ರ ವಾಹನಗಳು, ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್'ನ್ನು ಹಾನಿಗೊಳಿಸಿದೆ ಎಂದು ತಿಳಿದುಬಂದಿದೆ.

ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದ ರಸ್ತೆಯಲ್ಲಿ ಮರ ಬಿದ್ದು ಸುಮನಹಳ್ಳಿ ಕಡೆಗೆ ಸಾಗುವ ಸಂಚಾರದ ಮೇಲೆ ಪರಿಣಾಮ ಬೀರಿತ್ತು.

ಕಸ್ತೂರಿನಗರ, ಹೆಬ್ಬಾಳ, ದೊಮ್ಮಲೂರಿನ ಬಳಿಯ ಎಸಿಎಸ್ ಸೆಂಟರ್, ವರ್ತೂರು-ಗುಂಜೂರು ರಸ್ತೆ, ಹೊರಮಾವು ಮತ್ತು ಹೆಬ್ಬಾಳ ಮುಂತಾದ ಹಲವಾರು ಪ್ರದೇಶಗಳಲ್ಲಿ, ರಸ್ತೆಗಳಲ್ಲಿ ನೀರು ನಿಂತ ಕಾರಣ ಸಂಚಾರ ನಿಧಾನವಾಗಿತ್ತು. ಇದಲ್ಲದೆ, ಅಂಡರ್‌ಪಾಸ್‌ಗಳಲ್ಲಿ ನೀರು ತುಂಬಿ ಸಂಚಾರ ದಟ್ಟಣೆ ಸಮಸ್ಯೆಗಳು ಕಂಡು ಬಂದಿತ್ತು. ತಗ್ಗು ಪ್ರದೇಶಗಳಲ್ಲಿನ ಕೆಲವು ಮನೆಗಳಿಗೂ ನೀರು ನುಗ್ಗಿ, ಜನರು ಸಮಸ್ಯೆ ಎದುರಿಸುವಂತಾಗಿತ್ತು.

ಹೊರಮಾವುವಿನ ಸಾಯಿ ಲೇಔಟ್‌ನಲ್ಲಿ ನೀರು ನಿಲ್ಲದಂತೆ ಮಾಡಲು ಆಯುಕ್ತ ಡಿ ಎಸ್ ರಮೇಶ್ ಅವರು 13.36 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಕಾರ್ಯಗಳನ್ನು ಪರಿಶೀಲಿಸಿದರು,

ಕಾಮಗಾರಿ ವೇಳೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಆಯುಕ್ತರು ನಿರ್ದೇಶಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್