ಡಾ ಬಿ ದಿನೇಶ್  
ರಾಜ್ಯ

5 ಕಾರ್ಪೊರೇಷನ್ ಗಳಲ್ಲಿ ಸ್ಯಾಟಲೈಟ್ ಆಸ್ಪತ್ರೆ ಸ್ಥಾಪನೆಗೆ ಪ್ರಸ್ತಾವನೆ: ಜಯದೇವ ಸಂಸ್ಥೆ ನಿರ್ದೇಶಕರಾಗಿ ಡಾ. ಬಿ. ದಿನೇಶ್ ಅಧಿಕಾರ ಸ್ವೀಕಾರ

ಜಯದೇವದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಸಾವಿರಕ್ಕಿಂತ ಕಡಿಮೆ ಇದ್ದ ವಾಕ್-ಇನ್‌ ರೋಗಿಗಳ ಸಂಖ್ಯೆ ಈಗ 2 ಸಾವಿರಕ್ಕೆ ತಲುಪುತ್ತಿವೆ.

ಬೆಂಗಳೂರು: ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ. ಬಿ. ದಿನೇಶ್ ಗುರುವಾರ ಅಧಿಕಾರ ವಹಿಸಿಕೊಂಡರು.

ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಡಾ. ದಿನೇಶ್, ಹೊಸದಾಗಿ ರಚನೆಯಾದ ಗ್ರೇಟರ್ ಬೆಂಗಳೂರಿನ 5 ಕಾರ್ಪೊರೇಷನ್ ಗಳಲ್ಲಿ ಜಯದೇವ ಸ್ಯಾಟಲೈಟ್ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆಯನ್ನು ಕಳುಹಿಸುವುದಾಗಿ ಹೇಳಿದರು. ಬೆಂಗಳೂರು ನಗರದ ಹೆಚ್ಚುತ್ತಿರುವ ಜನಸಂಖ್ಯೆಗೆ ತಲಾ 100 ಹಾಸಿಗೆಗಳನ್ನು ಹೊಂದಬಲ್ಲ ಈ ಐದು ಸ್ಯಾಟಲೈಟ್ ಕೇಂದ್ರಗಳು ಬಹಳ ಅಗತ್ಯವಾಗಿವೆ ಎಂದು ಅವರು ಹೇಳಿದರು.

ಜಯದೇವದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಸಾವಿರಕ್ಕಿಂತ ಕಡಿಮೆ ಇದ್ದ ಹೊರ ರೋಗಿಗಳ ಸಂಖ್ಯೆ ಈಗ 2 ಸಾವಿರಕ್ಕೆ ತಲುಪುತ್ತಿವೆ. ನಗರದ ವಿವಿಧ ಮೂಲೆಗಳಿಂದ ಜನರು ಜಯದೇವ ಆಸ್ಪತ್ರೆಗೆ ಭೇಟಿ ಮಾಡುತ್ತಾರೆ.

ಐದು ಕಾರ್ಪೊರೇಷನ್ ಗಳಲ್ಲಿ ಪ್ರತಿಯೊಂದರಲ್ಲಿಯೂ ಒಂದು ಸ್ಯಾಟಲೈಟ್ ಕೇಂದ್ರ ಬಂದರೆ ಉತ್ತಮ. ಇದು ಮುಖ್ಯ ಶಾಖೆಯ ಮೇಲಿನ ಹೊರೆ ಕಡಿಮೆ ಮಾಡುವುದಲ್ಲದೆ, ರೋಗಿಗಳ ಪ್ರಯಾಣದ ತೊಂದರೆಯನ್ನು ನಿವಾರಿಸುತ್ತದೆ ಎಂದು ಅವರು ಹೇಳಿದರು.

ಸಾಕಷ್ಟು ಸ್ಥಳವಿದ್ದರೆ ಐದು ಕಾರ್ಪೊರೇಷನ್ ಗಳಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಯಾಟಲೈಟ್ ಕೇಂದ್ರಗಳನ್ನು ಸ್ಥಾಪಿಸಬಹುದು. ಐದು ನಿಗಮಗಳಲ್ಲಿ ಕನಿಷ್ಠ 100 ಹಾಸಿಗೆಗಳನ್ನು ಹೊಂದುವ ಗುರಿಯನ್ನು ನಾವು ಹೊಂದಿದ್ದೇವೆ, ಎಂದು ಡಾ. ದಿನೇಶ್ ಹೇಳಿದರು.

ಹೊರರೋಗಿ ವಿಭಾಗದ (OPD) ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ನಿಮ್ಹಾನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವಂತೆಯೇ ವಸತಿ ನಿಲಯ ಸೌಲಭ್ಯವನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Please wait...': ಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶ; ಹೇಳಿದ್ದೇನು?

ಭಾರತದ ಸಿಇಸಿ ಜ್ಞಾನೇಶ್ ಕುಮಾರ್ ಗೆ ವಿಶ್ವ ಚುನಾವಣಾ ಸಂಸ್ಥೆಯ ಅಧ್ಯಕ್ಷ ಹುದ್ದೆ!

ಹಾಂಗ್ ಕಾಂಗ್ ನಲ್ಲಿ ಭೀಕರ ಅಗ್ನಿ ಅವಘಡ: 32 ಅಂತಸ್ತಿನ ಅಪಾರ್ಟ್ ಮೆಂಟ್ ಗೆ ಬೆಂಕಿ, 13 ಮಂದಿ ಸಾವು, 700 ಮಂದಿ ಸ್ಥಳಾಂತರ! Video

ಐಎಎಸ್​ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ: ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ

'ಉಪದೇಶ ನೀಡಲು ನೈತಿಕ ಆಧಾರವೇ ಇಲ್ಲ': ರಾಮ ಮಂದಿರ ಧ್ವಜಾರೋಹಣ ಸಮಾರಂಭ ಟೀಕಿಸಿದ್ದ ಪಾಕಿಸ್ತಾನಕ್ಕೆ ತಿವಿದ ಭಾರತ

SCROLL FOR NEXT