ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್

ಗಣಪತಿ ವಿಗ್ರಹಗಳು ದೇಶದ ಯಾವುದೇ ಮಸೀದಿಗಳ ಮುಂದೆ ಹಾದುಹೋಗುವ ಹಕ್ಕಿದೆ, ಇದನ್ನು ವಿರೋಧಿಸುವವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿಕೆ ನೀಡಿದ್ದಾರೆ .

ಮಂಡ್ಯ: ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು.

ಗಣಪತಿ ವಿಗ್ರಹಗಳು ದೇಶದ ಯಾವುದೇ ಮಸೀದಿಗಳ ಮುಂದೆ ಹಾದುಹೋಗುವ ಹಕ್ಕಿದೆ, ಇದನ್ನು ವಿರೋಧಿಸುವವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಅಧಿಕಾರಕ್ಕೆ ಬಂದರೆ "ಅಕ್ರಮ ಮಸೀದಿಗಳನ್ನು" ಕೆಡವಲಾಗುವುದು ಎಂದು ಎಚ್ಚರಿಸಿದ್ದಾರೆ. ನಿರ್ದಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎನ್‌ಎಸ್ ಸೆಕ್ಷನ್ 196(1)(ಚಿ), 299, 353(2) ಅನ್ಯಕೋಮಿಗೆ ಧಕ್ಕೆ ಹಾಗೂ ಕೋಮುಗಳ ನಡುವೆ ವೈರತ್ವ ಉಂಟುಮಾಡುವ ಭಾಷಣ ಮಾಡಿರುವ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bihar polls: ಎನ್‌ಡಿಎ ಪ್ರಣಾಳಿಕೆ ಬಿಡುಗಡೆ; ಒಂದು ಕೋಟಿ ಯುವಕರಿಗೆ ಉದ್ಯೋಗ, ಉಚಿತ ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ ಭರವಸೆ

ಸರ್ದಾರ್ ಪಟೇಲರು ಇಡೀ ಕಾಶ್ಮೀರವನ್ನು ಭಾರತದೊಂದಿಗೆ ಒಗ್ಗೂಡಿಸಲು ಬಯಸಿದ್ದರು, ಆದರೆ ಜವಹರಲಾಲ್ ನೆಹರೂ ಅದಕ್ಕೆ ಅವಕಾಶ ನೀಡಲಿಲ್ಲ: ಪ್ರಧಾನಿ ಮೋದಿ

ಬಿಹಾರದಲ್ಲಿ ನರೇಂದ್ರ ಮೋದಿ ಹನುಮಾನ್‌ ಚಿರಾಗ್‌ ಪಾಸ್ವಾನ್‌ (ನೇರ ನೋಟ)

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದೋಷಾರೋಪ ನಿಗದಿ ನ.3ಕ್ಕೆ ಮುಂದೂಡಿಕೆ

ಜೆಫ್ರಿ ಎಪ್ಸ್ಟೀನ್ ಜೊತೆಗೆ ಅಕ್ರಮ ಸಂಬಂಧ ಆಪಾದನೆ: ಪ್ರಿನ್ಸ್ ಆಂಡ್ರ್ಯೂ ಬಿರುದು ತೆಗೆದುಹಾಕಿ ಅರಮನೆಯಿಂದ ಹೊರಹಾಕಿದ King Charles III

SCROLL FOR NEXT