ಸಾಂದರ್ಭಿಕ ಚಿತ್ರ 
ರಾಜ್ಯ

ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ

ಕಲಬುರಗಿ ನಗರದಲ್ಲಿ, ಬೆಳಿಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಭಾರೀ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿಮೀ ಮಳೆಯಾಗಿದೆ.

ಬೆಂಗಳೂರು: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರವೂ ಕೂಡ ಸಾಧಾರಣದಿಂದ ಭಾರೀ ಮಳೆಯಾಗಿದೆ. ಮುಂಬೈ ಕರ್ನಾಟಕದ ಹಲವು ಭಾಗಗಳು ಮೋಡ ಕವಿದ ವಾತಾವರಣದಿಂದ ಕೂಡಿದೆ.

ಕಲಬುರಗಿ ನಗರದಲ್ಲಿ, ಬೆಳಿಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಭಾರೀ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ,

ಯಾದಗಿರಿ ಜಿಲ್ಲೆಯ ಹಲವು ಭಾಗಗಳಲ್ಲಿ ರಾತ್ರಿಯಿಡೀ ಮಳೆಯಾಗಿದೆ. ಬಚಾಪುರ ಬಳಿ ಹೊಳೆಯಲ್ಲಿ ಸೇತುವೆ ದಾಟುವಾಗ ಬೈಕ್ ಸವಾರನೊಬ್ಬ ಗಾಯಗೊಂಡಿದ್ದ. ಸ್ಥಳೀಯರು ಹೊಳೆಯಲ್ಲಿ ಕೊಚ್ಚಿ ಹೋಗದಂತೆ ಆತನನ್ನು ರಕ್ಷಿಸಿದರು.

ರಾಯಚೂರಿನ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ರಾಯಚೂರು ನಗರ ಮತ್ತು ಹಟ್ಟಿ ಪಟ್ಟಣದಲ್ಲಿ ಮೂರು ಗಂಟೆಗಳ ಕಾಲ ನೀರು ತುಂಬಿತ್ತು. ಭಾರೀ ಮಳೆಯಿಂದಾಗಿ ರಾಯಚೂರು ತಾಲ್ಲೂಕು ಆಡಳಿತ ಗುರುವಾರ ಶಾಲೆಗಳಿಗೆ ರಜೆ ಘೋಷಿಸಿತ್ತು. ಮಾರಲದಿನ್ನಿ ಬಳಿಯ ಮಸ್ಕಿ ಜಲಾಶಯದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಉತ್ತಮ ಒಳಹರಿವು ಬರುತ್ತಿದೆ.

ಕಳೆದ ಎರಡು ದಿನಗಳಲ್ಲಿ ಸುರಿದ ಭಾರಿ ಮಳೆಯಿಂದ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಭತ್ತ, ಹತ್ತಿ ಮತ್ತು ತೊಗರಿ ಸೇರಿದಂತೆ ನೂರಾರು ಎಕರೆಗಳಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತವಾಗಿವೆ.

ಬಳ್ಳಾರಿ ಜಿಲ್ಲೆಯಲ್ಲಿ ಭಾರಿ ಮಳೆಯ ನಂತರ ನಾಲ್ಕು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಸಂಡೂರು ಬಳಿಯ ನಾರಿಹಳ್ಳ ಜಲಾಶಯಕ್ಕೆ ಉತ್ತಮ ಒಳಹರಿವು ಮುಂದುವರೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ತಗ್ಗು ಪ್ರದೇಶಗಳು ಮತ್ತು ಬೀದಿಗಳು ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ ಜಲಾವೃತಗೊಂಡವು. ಐಎಂಡಿ ಪ್ರಕಾರ, ಸೆಪ್ಟೆಂಬರ್ 17 ರವರೆಗೆ ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಲು ಶಿಕ್ಷೆಗೆ ಗುರಿಯಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಿಸಿ: ಭಾರತಕ್ಕೆ ಬಾಂಗ್ಲಾದೇಶ ಆಗ್ರಹ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!

Delhi blast: ಪ್ರಮುಖ ಆರೋಪಿಯ ಸಹಚರನನ್ನು ಬಂಧಿಸಿದ NIA

Delhi blast: ಆಸ್ಪತ್ರೆಯಲ್ಲಿ ಮತ್ತೆ ಇಬ್ಬರು ಸಾವು; ಸಾವಿನ ಸಂಖ್ಯೆ 15ಕ್ಕೆ ಏರಿಕೆ

'ವಿದೇಶದಲ್ಲಿ ವಾಸ, 20 ಕೋಟಿ ರೂ ಆದಾಯ': Piracy ಮಾಸ್ಟರ್ ಮೈಂಡ್ Ravi immadi ಸಿಕ್ಕಿಬಿದ್ದಿದ್ದೇ ರೋಚಕ; ಪತ್ನಿಯೇ ತೋಡಿದ್ದಳು ಗುಂಡಿ!

SCROLL FOR NEXT