ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 
ರಾಜ್ಯ

'ಕಾಂಗ್ರೆಸ್ಸಿಗರು ಮಾತನಾಡಿದರೂ ಕ್ರಮ.. ಕಾನೂನು ಎಲ್ಲರಿಗೂ ಒಂದೇ': Lakshmi Hebbalkar

ಕೋಮು ಸೌಹಾರ್ದತೆ ಕೆಡಿಸುವುದು ಬಿಜೆಪಿಯು ಹಿಂದಿನಿಂದಲೂ ನಡೆಸಿ ಬಂದ ಅಜೆಂಡಾ. ಯಾರು ಕೂಡ ಕಾನೂನು ಕೈಯಲ್ಲಿ ತೆಗೆದುಕೊಳ್ಳಬಾರದು.

ಉಡುಪಿ: ದ್ವೇಷಪೂರಿತ ಭಾಷಣ ಮಾಡಿದರೆ ಕ್ರಮ ಕೈಗೊಳ್ಳಲು ಅಸೆಂಬ್ಲಿಯಲ್ಲಿ ಶಾಸನ ತೆಗೆದುಕೊಂಡು ಬರಲಾಗಿದ್ದು, ಬಿಜೆಪಿ- ಕಾಂಗ್ರೆಸ್ ಯಾರೇ ಆಗಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಶುಕ್ರವಾರ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೈಲೂರಿನಲ್ಲಿ ನೀರೆ ಕಣಜಾರು ಗ್ರಾಮ ಪಂಚಾಯತ್‌ನ ನೂತನ ಆಡಳಿತ ಕಟ್ಟಡ ಗ್ರಾಮ ಸೌಧದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, 'ರಾಜ್ಯ ಸರ್ಕಾರವನ್ನು ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ.

ಸರ್ಕಾರ ಬೀಳುತ್ತೆ ಎಂದು ಕಾದು ಕುಳಿತಿದ್ದಾರೆ. ಗ್ಯಾರಂಟಿ ಜಾರಿ ಆಗಲ್ಲ ಅಂದರು, ಗ್ಯಾರಂಟಿ ಯೋಜನೆ ನಾಲ್ಕೇ ತಿಂಗಳು ನಡೆಯುತ್ತೆ ಅಂದರು. ಆಮೇಲೆ ಆಪರೇಷನ್ ಕಮಲ ಅಂದ್ರು ಆದರೆ ಯಾವುದೂ ಕೈಗೂಡಲಿಲ್ಲ ಎಂದು ಕಿಡಿಕಾರಿದರು.

ಅಂತೆಯೇ ರಾಜ್ಯದ ಜನತೆಗೆ ನಾವೆಲ್ಲ ಅನುಕೂಲತೆ ಮಾಡಿದ್ದೇವೆ. ಕೋಮು ಸೌಹಾರ್ದತೆ ಕೆಡಿಸುವುದು ಬಿಜೆಪಿಯು ಹಿಂದಿನಿಂದಲೂ ನಡೆಸಿ ಬಂದ ಅಜೆಂಡಾ. ಯಾರು ಕೂಡ ಕಾನೂನು ಕೈಯಲ್ಲಿ ತೆಗೆದುಕೊಳ್ಳಬಾರದು. ಯಾವುದೇ ಸಮಾಜ ಕಾನೂನು ಕೈಗೆ ತೆಗೆದುಕೊಂಡರೆ ಖಂಡಿಸುತ್ತೇವೆ ಎಂದರು.

ಇದೇ ವೇಳೆ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಿಸಿದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, 'ದ್ವೇಷಪೂರಿತ ಭಾಷಣ ಮಾಡಿದರೆ ಕ್ರಮ ಕೈಗೊಳ್ಳಲು ಅಸೆಂಬ್ಲಿಯಲ್ಲಿ ಶಾಸನ ತೆಗೆದುಕೊಂಡು ಬಂದಿದ್ದೇವೆ. ಬಿಜೆಪಿ- ಕಾಂಗ್ರೆಸ್ ಯಾರೇ ಆಗಲಿ ಕ್ರಮ ಕೈಗೊಳ್ಳಲಾಗುತ್ತದೆ.

ನಾಳೆ ಕಾಂಗ್ರೆಸ್ಸಿಗರು ಮಾತನಾಡಿದರೂ ಕ್ರಮ ಆಗುತ್ತದೆ. ಕಾನೂನು ಎಲ್ಲರಿಗೂ ಒಂದೇ ಅಲ್ವಾ!? ಶಾಂತಿಯನ್ನು ಕದಡುವ ಕೆಲಸ ಮಾಡಿದರೆ ಖಂಡಿತ ಎಫ್ ಐ ಆರ್ ಆಗುತ್ತೆ. ನಾಳೆ ನಾನು ಆ ಕೆಲಸ ಮಾಡಿದರೂ ಎಫ್ ಐ ಆರ್ ಆಗುತ್ತೆ ಎಂದರು.

ಭಾನು ಮುಷ್ತಾಕ್ ದಸರಾ ಉದ್ಘಾಟನೆ ವಿವಾದದ ಕುರಿತು ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಈ ಬಗ್ಗೆ ಮುಖ್ಯಮಂತ್ರಿಗಳು ಸಾಕಷ್ಟು ಬಾರಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರ ನಂತರ ನಾನು ಮಾತನಾಡುವುದು ಸರಿಯಲ್ಲ ಎಂದರು.

ಧರ್ಮಸ್ಥಳ ಎಸ್ಐಟಿ ತನಿಖೆ ನಿಧಾನಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ನಾನು ಈ ಮೊದಲೇ ಒಂದು ಮಾತನ್ನು ಹೇಳಿದ್ದೇನೆ. ಇವತ್ತಿಗೂ ನನ್ನದು ಅದೇ ಅಭಿಪ್ರಾಯ. ಧರ್ಮಸ್ಥಳ ನಮ್ಮೆಲ್ಲರ ಆರಾಧ್ಯ ಸ್ಥಳ. ಬಹಳಷ್ಟು ಭಕ್ತಿಯಿಂದ ನಡೆದುಕೊಳ್ಳುವ ಸ್ಥಳ. ಏನೆಲ್ಲಾ ಷಡ್ಯಂತ್ರ ಆಗಿದೆ ಅವೆಲ್ಲಾ ಹೊರ ಬರುತ್ತೆ. ಎಸ್ಐಟಿ ತನ್ನ ಕೆಲಸ ಏನು ಮಾಡುತ್ತಿದೆ ಎಂದು ಸಾರ್ವಜನಿಕವಾಗಿ ಹೇಳಲು ಆಗುವುದಿಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

Video: ಕೊನೆಗೂ ಕೊಟ್ಟ ಮಾತು ಉಳಿಸಿಕೊಂಡ Sunil Gavaskar, ಜೆಮಿಮಾ ಜತೆ ಮ್ಯೂಸಿಕಲ್ ಡ್ಯೂಯೆಟ್!

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

SCROLL FOR NEXT