ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

Hassan Tragedy: ನನ್ನಮ್ಮ ಹುಟ್ಟಿದೂರು, ನೋವಾಯ್ತು ಅದಕ್ಕೆ ಬಂದೆ; ಗಾಯಾಳುಗಳ ವಿಚಾರಿಸಿದ ದೇವೇಗೌಡ, ತಲಾ 1 ಲಕ್ಷ ರೂ ಪರಿಹಾರ!

ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಸದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದ ಈ ದುರಂತ ಮನಸ್ಸು ಕದಡುವಂತೆ ಮಾಡಿದೆ.

ಹಾಸನ: ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಸದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದ ಈ ದುರಂತ ಮನಸ್ಸು ಕದಡುವಂತೆ ಮಾಡಿದೆ. ಇನ್ನು ಘಟನಾ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ತೆರಳಿದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ನನ್ನಮ್ಮು ಹುಟ್ಟಿದ ಊರು ಇದು. ಮನಸ್ಸು ತಡಿಯಲಿಲ್ಲ. ಅದಕ್ಕಾಗಿ ಬಂದೆ ಎಂದು ಹೇಳಿದ್ದಾರೆ. ಇನ್ನು ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ದೇವೇಗೌಡ ಘೋಷಣೆ ಮಾಡಿದರು.

ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ ರೂ., ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 20 ಸಾವಿರ ರೂ., ಚಿಕ್ಕಪುಟ್ಟ ಗಾಯಗೊಂಡವರಿಗೆ ತಲಾ 15 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು. ಸರ್ಕಾರ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ ದೇವೇಗೌಡ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್