ಕೃಷ್ಣ ಬೈರೇಗೌಡ  
ರಾಜ್ಯ

ಹಾಸನ ಗಣೇಶ ಮೆರವಣಿಗೆ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ; ಸ್ಥಳಕ್ಕೆ ಕೃಷ್ಣ ಬೈರೇಗೌಡ ಭೇಟಿ

ನಿನ್ನೆ ರಾತ್ರಿ ಸಂಭವಿಸಿದ ಟ್ರಕ್‌ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಚಂದನ್‌ ಎಂಬ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹಾಸನ: ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 10ಕ್ಕೆ ಏರಿಕೆಯಾಗಿದೆ.

ನಿನ್ನೆ ರಾತ್ರಿ ಸಂಭವಿಸಿದ ಟ್ರಕ್‌ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಚಂದನ್‌ ಎಂಬ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಅವರು ಹಾಸನ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಕೃಷ್ಣ ಬೌರೇಗೌಡ ಅವರು ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು ಮತ್ತು ಅವರ ಕುಟುಂಬಗಳೊಂದಿಗೆ ಮಾತುಕತೆ ನಡೆಸಿದರು ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಇದಕ್ಕು ಮುನ್ನ ಕೃಷ್ಣ ಬೈರೇಗೌಡ ಅವರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರು ಹಾಗೂ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಈ ವೇಳೆ, ಜನರು ಪರಿಹಾರ ಕಡಿಮೆ ಎಂಬ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದಿಂದ ಘೋಷಿಸಲಾಗಿರುವ ಐದು ಲಕ್ಷ ರೂಪಾಯಿ ಪರಿಹಾರ ಸಾಕಾಗುವುದಿಲ್ಲ ಎಂದು ಜನ ಹೇಳಿದ್ದು, ಹೆಚ್ಚಿನ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಜನರನ್ನು ಸಮಾಧಾನಪಡಿಸಿದ ಸಚಿವರು, ಹೆಚ್ಚಿನ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT